ಇತಿಹಾಸದಲ್ಲಿಯೇ ಮೊದಲ ಬಾರಿಗೆ ಏಕಕಾಲದಲ್ಲಿ ಎರಡು ಟೂರ್ನಿ ಆಡುತ್ತಿರುವ ಭಾರತ!

0
Spread the love

ವಿಜಯಸಾಕ್ಷಿ ಸುದ್ದಿ, ಮುಂಬಯಿ

Advertisement

ಶ್ರೀಲಂಕಾ ಪ್ರವಾಸಕ್ಕೆ ಭಾರತೀಯ ಪುರುಷರ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಎಡಗೈ ಆಟಗಾರ ಶಿಖರ್ ಧವನ್ ಗೆ ತಂಡದ ಸಾರಥ್ಯ ವಹಿಸಲಾಗಿದೆ. ನಾಯಕ ಕೊಹ್ಲಿ ಹಾಗೂ ಇನ್ನಿತರ ಹಿರಿಯ ಆಟಗಾರರ ತಂಡ ಇಂಗ್ಲೆಂಡ್ ಪ್ರವಾಸದಲ್ಲಿರಿವುದರಿಂದಾಗಿ ಶಿಖರ್ ಧವನ್ ಗೆ ತಂಡದ ನಾಯಕತ್ವ ನೀಡಲಾಗಿದೆ. ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ.

ಹಿರಿಯ ಆಟಗಾರರ ಅನುಪಸ್ಥಿತಿ ಇರುವ ಹಿನ್ನೆಲೆಯಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಕಳೆದ ಎರಡು ಐಪಿಎಲ್ ಟೂರ್ನಿಯಲ್ಲಿ ಅಬ್ಬರಿಸಿದ್ದ ಯುವ ಬ್ಯಾಟ್ಸಮನ್ ಗಳಾದ ದೇವದತ್ ಪಡಿಕ್ಕಲ್ ಹಾಗೂ ರುತುರಾಜ್ ಗಾಯಕ್ವಾಡ್ ಅವರು ಈ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಅಲ್ಲದೇ, ಎಡಗೈ ಬ್ಯಾಟ್ಸಮನ್ ನಿತೀಶ್ ರಾಣಾ ಕೂಡ ಈ ತಂಡದಲ್ಲಿದ್ದಾರೆ. ಆ ಮೂಲಕ ರಾಣಾ ಲಂಕಾ ಪ್ರವಾಸದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದಂತಾಗುತ್ತಿದೆ.

ಇನ್ನುಳಿದಂತೆ ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್ ಗೆ ಪಾದಾರ್ಪಣೆ ಮಾಡಿದ್ದ ಎಡಗೈ ವೇಗದ ಬೌಲರ್ ಚೇತನ್ ಸಕರಿಯಾ, ಆಲ್‌ ರೌಂಡರ್ ಕೃಷ್ಣಪ್ಪ ಗೌತಮ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ನವದೀಪ್ ಸೈನಿ ಅವರಿಗೆ ಸಿಕ್ಕಿದೆ.

ಭಾರತ ತಂಡ ಶ್ರೀಲಂಕಾ ವಿರುದ್ಧ 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಲಿದೆ. ಏಕದಿನ ಪಂದ್ಯಗಳು ಜುಲೈ 13 ರಿಂದ ಪ್ರಾರಂಭವಾಗಲಿದ್ದು, ಟಿ 20 ಸರಣಿ ಜುಲೈ 21 ರಿಂದ ಆರಂಭವಾಗಲಿದೆ. ಏಕದಿನ ಪಂದ್ಯಗಳು ಜುಲೈ 13, 16 ಮತ್ತು 18 ರಂದು ನಡೆಯಲಿವೆ. ಟಿ 20 ಪಂದ್ಯಗಳು ಜುಲೈ 21, 23 ಮತ್ತು 25 ರಂದು ನಡೆಯಲಿವೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ಪಂದ್ಯಗಳು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿವೆ.
ಭಾರತ ತಂಡದಲ್ಲಿ ಶಿಖರ್ ಧವನ್ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಪೃಥ್ವಿ ಶಾ, ದೇವದತ್ತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಎಸ್ ಸ್ಯಾಮ್ಸನ್ (ವಿಕೆಟ್ ಕೀಪರ್), ಯಜ್ವೇಂದ್ರ ಚಹಲ್, ರಾಹುಲ್ ಚಹರ್ , ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ದೀಪಕ್ ಚಹರ್, ನವ್ ದೀಪ್ ಸೈನಿ, ಚೇತನ್ ಸಕರಿಯಾ
ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಅರ್ಷ್‌ ದೀಪ್ ಸಿಂಗ್, ಸಾಯಿ ಕಿಶೋರ್, ಸಿಮಾರ್ಜೀತ್ ಸಿಂಗ್ ಇದ್ದಾರೆ.

ಭಾರತೀಯ ಕ್ರಿಕೆಟ್ ತಂಡ ಇದೇ ಜೂ. 18ರಿಂದ ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಡಲಿದೆ. ಆ ನಂತರ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾಗವಹಿಸಲಿದೆ. ಇಂಗ್ಲೆಂಡ್ ನಲ್ಲಿ ಭಾರತ ತಂಡ ಆಗಷ್ಟ್ 4 ರಿಂದ ಏಕದಿನ, ಟಿ20 ಮತ್ತು ಟೆಸ್ಟ್ ಸರಣಿಗಳನ್ನು ಆಡಲಿದೆ. ಜುಲೈನಲ್ಲಿ ಒಂದೆಡೆ ಇಂಗ್ಲೆಂಡ್ ಪ್ರವಾಸ ಮತ್ತೊಂದೆಡೆ ಶ್ರೀಲಂಕಾ ಪ್ರವಾಸ ಇದೆ. ಇದೆ ಮೊದಲ ಬಾರಿಗೆ ಭಾರತ ತಂಡ ಈ ರೀತಿ ಏಕಕಾಲದಲ್ಲಿ ಏರಡೆರಡು ಸರಣಿಯಲ್ಲಿ ಭಾಗವಹಿಸುತ್ತಿದೆ.


Spread the love

LEAVE A REPLY

Please enter your comment!
Please enter your name here