HomeKarnataka Newsತುಳುನಾಡಿನ ದೈವಕ್ಕೆ ತಲೆಬಾಗಿದ ಜನಾರ್ದನ ರೆಡ್ಡಿ: ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ

ತುಳುನಾಡಿನ ದೈವಕ್ಕೆ ತಲೆಬಾಗಿದ ಜನಾರ್ದನ ರೆಡ್ಡಿ: ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ

For Dai;y Updates Join Our whatsapp Group

Spread the love

ಮಂಗಳೂರು: ಅಕ್ರಮ ಗಣಿಗಾರಿಕೆ ಹಗರಣದಿಂದ ಜಾಮೀನಿನಲ್ಲಿ ಬಿಡುಗಡೆಯಾಗಿ ಮತ್ತೆ ರಾಜಕೀಯ ಚಟುವಟಿಕೆಯಲ್ಲಿ ತೊಡಗಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ, ಇದೀಗ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಟೆಂಪೆಲ್ ರನ್ ನಡೆಸುತ್ತಿದ್ದಾರೆ. ಇತ್ತೀಚಿಗೆ ಅವರು ದಕ್ಷಿಣ ಕನ್ನಡದ ಪ್ರಸಿದ್ಧ ಕಟಿಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು.

ಇಂದು ಅವರು ತುಳುನಾಡಿನ ದೈವಗಳ ದರ್ಶನಕ್ಕೆ ತೆರಳಿದ್ದಾರೆ. ಕಡಬ ತಾಲೂಕಿನ ಸವಣೂರಿನ ಆರೇಲ್ತಡಿಯಲ್ಲಿರುವ ಇರ್ವೆರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವ ದೇವಸ್ಥಾನಗಳಿಗೆ ಭೇಟಿ ನೀಡಿ, ಆಶಿರ್ವಾದ ಪಡೆದರು.

ಶಾಸಕ ಜನಾರ್ದನ್​ ರೆಡ್ಡಿ ಅವರು ಮೇ 13ರಂದು ಕೆಡೆಂಜೋಡಿತ್ತಾಯಿ ದೈವಸ್ಥಾನದ ಬ್ರಹಕಲಶೋತ್ಸವದಲ್ಲಿ ಭಾಗವಹಿಸಬೇಕಿತ್ತು. ಆದರೆ, ಆಂಧ್ರ ಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೇ 6ರಂದು ಜೈಲುಪಾಲಾದರು. ಹೀಗಾಗಿ. ಕೆಡೆಂಜೋಡಿತ್ತಾಯಿ ದೈವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

ಮೇ 13ರಂದು ನಡೆದ ಕೆಡೆಂಜೋಡಿತ್ತಾಯಿ ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಜನಾರ್ದನ ರೆಡ್ಡಿ ಆಪ್ತರು ದೈವದ ಬಳಿ ಜನಾರ್ದನ್​ ರೆಡ್ಡಿ ಜೈಲಿನಿಂದ ಬಿಡುಗಡೆಯಾಗುವಂತೆ ಮೊರೆ ಇಟ್ಟರು. ಅಂದು ಕೆಡೆಂಜೋಡಿತ್ತಾಯಿ ದೈವ,

ಇಂದಿನಿಂದ ಒಂದು ತಿಂಗಳ ಒಳಗಡೆ ಜನಾರ್ದನ್​ ರೆಡ್ಡಿ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂದು ನುಡಿ ನೀಡಿತ್ತು. ದೈವ ನುಡಿದಂತೆ ಶಾಸಕ ಜನಾರ್ದನ್​ ರೆಡ್ಡಿ ಅವರಿಗೆ ಜೂನ್​ 11 ರಂದು ಜಾಮೀನು ನೀಡಲಾಯಿತು. ಹಾಗಾಗಿ‌, ಜನಾರ್ದನ್​ ರೆಡ್ಡಿ ಇಂದು ಸವಣೂರಿನಲ್ಲಿರುವ ಇರುವೆರ್ ಉಳ್ಳಾಕುಲು ಮತ್ತು ಕೆಡೆಂಜೋಡಿತ್ತಾಯಿ ಆರೇಲ್ತಡಿ ದೈವಸ್ಥಾನಕ್ಕೆ ತೆರಳಿ ತಂಬಿಲ‌ ಸೇವೆ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!