ಕಾರವಾರ:- ಹೆಚ್ಚು ಮೊಬೈಲ್ ನೋಡುತ್ತಿದ್ದ ಮಗನಿಗೆ ತಂದೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಸೂಸೈಡ್ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.
Advertisement
ಓಂ ಕದಂ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈತ ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಮನೆಯಲ್ಲಿ ಪ್ರತಿದಿನ ಹೆಚ್ಚು ಮೊಬೈಲ್ ನೋಡುತ್ತಾ ಕಾಲಕಳೆಯುತ್ತಿದ್ದ ಮಗನಿಗೆ ತಂದೆ ಮನೋಹರ್ ಮೊಬೈಲ್ ನೋಡದಂತೆ ಬುದ್ದಿವಾದ ಹೇಳುತಿದ್ದರು. ಮಾತು ಕೇಳದೇ ಓಂ ಕದಂ ಹಠಕ್ಕೆ ಬಿದ್ದು ಮೊಬೈಲ್ ನೋಡುತಿದ್ದ. ಮಂಗಳವಾರ ರಾತ್ರಿ ಮೊಬೈಲ್ ನೋಡುತ್ತಾ ಕಾಲ ಕಳೆಯುತಿದ್ದ ಮಗನಿಗೆ ಗದರಿಸಿ ಮೊಬೈಲ್ ಕಸಿದುಕೊಂಡು ಓದಿಕೊಳ್ಳುವಂತೆ ತಂದೆ ಮನೋಹರ್ ಬುದ್ದಿವಾದ ಹೇಳಿದ್ದರು.
ಇದರಿಂದ ಮನನೊಂದು ಓಂ ಕದಂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.