ಭಾರೀ ಮಳೆ: ಚಿಕ್ಕಮಗಳೂರಿನ ಪ್ರವಾಸಿಗರಿಗೆ ಜಿಲ್ಲಾಡಳಿತ ಎಚ್ಚರಿಕೆ!

0
Spread the love

ಚಿಕ್ಕಮಗಳೂರು:- ಮುಂದಿನ ಐದು ದಿನಗಳು ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿರುವ ಹಿನ್ನೆಲೆ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

Advertisement

ಜಿಲ್ಲೆಯಲ್ಲಿ ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪಶ್ಚಿಮಘಟ್ಟ ಸಾಲಿನಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಜಾಗ್ರತೆಯಿಂದ ಇರಬೇಕು. ಗುಡ್ಡ, ಧರೆ ಕುಸಿತದ ಸಂಭವವಿರುವುದರಿಂದ ಸ್ಥಳೀಯರು ಸಹ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಜಿಲ್ಲೆಯ ಪ್ರವಾಸಿ ತಾಣಗಳಿಗೆ ವೀಕೆಂಡ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನೂ ಜಿಲ್ಲೆಯಲ್ಲಿ ಬರುವ ನದಿಗಳ ಪಾತ್ರದಲ್ಲಿರುವ ಜನರು ಸಹ, ನದಿಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here