ವಿಜಯಸಾಕ್ಷಿ ಸುದ್ದಿ, ಧಾರವಾಡ: ಶಿವಳ್ಳಿ ಗ್ರಾಮ ಪಂಚಾಯಿತಿ ಒಕ್ಕೂಟದ ಮಹಿಳೆಯರ ಸ್ವ-ಉದ್ಯೋಗವಾದ ಹೆಮ್ಮೆಯ ಬ್ರ್ಯಾಂಡ್ `ಅಕ್ಕ’ ಸಿಹಿ ತಿನಿಸುಗಳನ್ನು ಸವಿದ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮೆಚ್ಚುಗೆ ವ್ಯಕ್ತಪಡಿಸಿ ಬೆಂಬಲಿಸಿದರು.
ಧಾರವಾಡ ರುಡ್ಸೆಟ್ನ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ಗ್ರಾ.ಪಂ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಗೆ ಆರು ದಿನಗಳ ಕಾಲ ಧಾರವಾಡ ಪೇಡಾ, ದೂದ್ ಪೇಡಾ, ಕುಂದಾ ಹಾಗೂ ಇತರೆ ಸಿಹಿ ತಿನಿಸುಗಳ ತರಬೇತಿ ನೀಡಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ್, ಜಿ.ಪಂ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರುಮಠ, ಜಿ.ಪಂ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.