ಬೆಂಗಳೂರು:- ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ ಗೆ ಸಂಬಂಧಿಸಿದಂತೆ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗ್ರಾಹಕನ ವಿರುದ್ಧವೇ ದೂರು ದಾಖಲಾಗಿದೆ.
Advertisement
ಇಂದು ಬೆಳಿಗ್ಗೆ ಏರ್ಪೋರ್ಟ್ ಬಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕನೋರ್ವ ಪೊಂಗಲ್ ಖರೀದಿಸಿ, ಸೇವಿಸುತ್ತಿರುವಾಗ ಅದರಲ್ಲಿ ಜಿರಳೆ ಪತ್ತೆಯಾಗಿದೆ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಮೇಶ್ವರಂ ಕೆಫೆ ಸ್ಪಷ್ಟನೆ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಗ್ರಾಹಕರು ಆಹಾರ ಮಾಲಿನ್ಯದ ಬಗ್ಗೆ ಸುಳ್ಳು ಆರೋಪ ಹೊರಿಸುತ್ತಿದ್ದು, ಈ ಮೂಲಕ ಬ್ರ್ಯಾಂಡ್ಮೇಲ್ಗೆ ಹಾನಿ ಮಾಡಲು ಹೊರಟಿದ್ದಾರೆ. ಜೊತೆಗೆ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ಸಂಬಂಧ ಗ್ರಾಹಕನ ವಿರುದ್ಧ ದಾಖಲಾಗಿದೆ.