ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಸಾಮಾಜಿಕ ಜಾಲತಾಣದಲ್ಲಿ ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಎಂಬ ಅಭಿಯಾನ ಪ್ರಾರಂಭವಾಗಿದೆ.
ಸದ್ಯ ಈ ಹ್ಯಾಶ್ ಟ್ಯಾಗ್ ಟ್ವೀಟರ್ ನಲ್ಲಿ ಟ್ರೆಂಡಿಂಗ್ ಆಗಿದೆ. ರಾಜ್ಯದಲ್ಲಿನ ಉದ್ಯೋಗಗಳು ಬೇರೆಯವರ ಪಾಲಾಗುತ್ತಿವೆ. ರಾಜ್ಯದಲ್ಲಿಯೇ ನಮ್ಮವರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
karnatakaJobsForkannadigas ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಅಭಿಯಾನ ಪ್ರಾರಂಭವಾಗಿದೆ. ಈ ಅಭಿಯಾನಕ್ಕೆ ಸಾಕಷ್ಟು ಕನ್ನಡಿಗರು ಕೈ ಜೋಡಿಸಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಈ ಮೂಲಕ ಆಗ್ರಹಿಸಲಾಗಿದೆ.