ಸರ್ವೇ ಮಾಡಿಸಿದ್ರೆ ಯಾರು ಎಷ್ಟು ಕೆಲಸ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತೆ: ಸಂಸದ ಯದುವೀರ್

0
Spread the love

ಮೈಸೂರು: ಸರ್ವೇ ಮಾಡಿಸಿದ್ರೆ ಯಾರು ಎಷ್ಟು  ಕೆಲಸ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್ ಒಡೆಯರ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,

Advertisement

ನಾಲ್ವಡಿ ಕೃಷ್ಣರಾಜ ಒಡೆಯರ್​ ಮಾಡಿರುವ ಕೆಲಸ ಜನರ ಹಿತಕ್ಕಾಗಿ, ಅದು ಹೋಲಿಕೆಗಾಗಿ ಮಾಡಿರುವ ಕೆಲಸವಲ್ಲ. ನಾನು ನಮ್ಮ ವಂಶದ ಬಗ್ಗೆ ಮಾತನಾಡುವುದು ಸರಿಯಲ್ಲ. ಫೀಲ್ಡಿಗಿಳಿದು ಜನರನ್ನು ಕೇಳಿದರೆ ಅವರೇ ಉತ್ತರ ಕೊಡುತ್ತಾರೆ.

ನಮ್ಮ ಪೂರ್ವಿಕರು ಭವಿಷ್ಯದ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ಈಗ ಕಾಂಗ್ರೆಸ್​ನವರು ಜನರ ದಿಕ್ಕು ತಪ್ಪಿಸಲು ಈ ರೀತಿ ಮಾಡುತ್ತಿದ್ದಾರೆ ಅನಿಸುತ್ತಿದೆ.

ಕಾಂಗ್ರೆಸ್ ನಾಯಕರು ಜನರ ಬಳಿ ಈ ವಿಚಾರ ಕೇಳಿದರೆ ಜನರೇ ಉತ್ತರ ನೀಡುತ್ತಾರೆ ಎಂದರು. ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ.


Spread the love

LEAVE A REPLY

Please enter your comment!
Please enter your name here