ಭೀಕರ ಅಪಘಾತ: ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ
ಗದಗ: ಡಿವೈಡರ್ನಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ ದುರ್ಘಟನೆ ಭಾನುವಾರ ರಾತ್ರಿ ಗದಗ ನಗರದ ಚನ್ನಮ್ಮ ಸರ್ಕಲ್ ಬಳಿ ನಡೆದಿದೆ.
ಮೃತರನ್ನು ಜವಳಗಲ್ಲಿಯ ಅಮನ್ ರಿಯಾಜ್ ಅಹ್ಮದ ಮುಳಗುಂದ(25) ಹಾಗೂ ಜುನೇದ್ ಮಕಬೂಲಸಾಬ ಕಾಗದಗಾರ (23) ಎಂದು ಗುರುತಿಸಲಾಗಿದೆ.
ಮುಳಗುಂದ ನಾಕಾದಿಂದ ಭೀಷ್ಮ ಕೆರೆ ಕಡೆ ಹೋಗುವಾಗ ಈ ಅಪಘಾತ ಸಂಭವಿಸಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲಿನಿಂದ ಬಲ್ಬ್ ಗಳು ಕೆಳಗೆ ಬಿದ್ದಿವೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದರು. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



