ವಿಜಯಸಾಕ್ಷಿ ಸುದ್ದಿ, ದಾವಣಗೆರೆ
ಕೊರೊನಾ ಹೆಮ್ಮಾರಿ ರಾಜ್ಯಕ್ಕೆ ಕಾಲಿಟ್ಟಾಗಿನಿಂದಲೂ ಜೀವದ ಹಂಗು ತೊರೆದು ಹಗಲಿರುಳು ಜನರ ಸೇವೆಗೆ ನಿಂತವರ ಪಟ್ಟಿ ಮಾಡುತ್ತ ಹೋದರೆ, ಶಾಸಕ ರೇಣುಕಾಚಾರ್ಯ ಮೊದಲಿಗರಾಗಿ ನಿಲ್ಲಬಹುದೇನೊ? ಸದ್ಯ ಇವರ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ.
ಶಾಸಕರ ಈ ಮಾನವೀಯ ಕಾರ್ಯಕ್ಕೆ ದುಬೈ ಕನ್ನಡಿಗರು ಮೆಚ್ಚುಗೆ ಮಾತುಗಳನ್ನು ಹೇಳಿ, ಧನ್ಯವಾದ ಅರ್ಪಿಸಿದ್ದಾರೆ. ವಿಡಿಯೋ ಸಂದೇಶದ ಮೂಲಕ ರೇಣುಕಾಚಾರ್ಯ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ದುಬೈ ಕನ್ನಡಿಗರ ಸಂಘದ ಅಧ್ಯಕ್ಷೆ ಉಮಾ ವಿದ್ಯಾಧರ್ ಮತ್ತು ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಕಾಲದಲ್ಲಿ ನಿಮ್ಮ ಸೇವೆ ಅಪಾರ. ಶಾಸಕರೇ ನಿಮ್ಮಲ್ಲಿರುವ ಸಾಮಾಜಿಕ ಕಳಕಳಿ ಕಂಡು, ಕೆಲಸ, ಕಾರ್ಯಗಳನ್ನು ಮೆಚ್ಚಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ದುಬೈ ಕನ್ನಡಿಗರ ಸಂಘದ ಉಪಾಧ್ಯಕ್ಷ ವಿನೀತ್ ಕುಮಾರ್, ಸದಸ್ಯರಾದ ದೀಪಕ್ ಸೋಮಶೇಖರ್, ಅರುಣ್ ಕುಮಾರ್, ವೆಂಕಟ್ ಕಾಮತ್ ಮತ್ತು ಶ್ರೀನಿವಾಸ್ ಅರಸ್ ಈ ಸಂದರ್ಭದಲ್ಲಿ ಇದ್ದಾರೆ.