ಹಾವೇರಿ: ಹುಟ್ಟು ಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ..!

0
Spread the love

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 28 ವರ್ಷದ ಮನೋಜ್ ಪ್ರಕಾಶ್ ಉಡಗಣ ಎಂದು ಗುರುತಿಸಲಾಗಿದೆ. ನೋಜ್ಗೆ ಕಂಠಪೂರ್ತಿ ಮದ್ಯ ಕುಡಿಸಿ, ವರದಾ ನದಿ ಬ್ರಿಡ್ಜ್ ಮೇಲಿಂದ ಆರೋಪಿಗಳು ನೂಕಿ ಹತ್ಯೆ ಮಾಡಿದ್ದಾರೆನ್ನಲಾಗಿದೆ

Advertisement

ನನ್ನ ಸಹೋದರನನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದಾರೆಂದು ಕೆಲವರ ವಿರುದ್ಧ ಮೃತ ಮನೋಜ್ ಸಹೋದರ ಶಂಭು ಗಂಭೀರ ಆರೋಪ ಮಾಡಿದ್ದಾರೆ. ಮದುವೆಯಾದ ಗೃಹಿಣಿಗೆ ಮೆಸೇಜ್ ಮಾಡುತ್ತಿದ್ದ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಮನೋಜ್, ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಆಕೆಗೆ ಬೇರೊಬ್ಬರ ಜೊತೆ ಮದುವೆಯಾಯಿತು. ಆದರೂ, ಮನೋಜ್ ಆಕೆಗೆ ಮೆಸೇಜ್ ಮಾಡುತ್ತಿದ್ದ.

ಇದರಿಂದ ಆಕೆಯ ಪತಿ ಕೋಪಗೊಂಡು ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಜು.26 ರಂದು ಮನೋಜ್ ಬರ್ತ್ಡೇ ಇತ್ತು. ಹುಟ್ಟುಹಬ್ಬದ ದಿನವೇ ಆತನನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ. ಸವಣೂರು ತಾಲೂಕು ಮೆಳ್ಳಾಗಟ್ಟಿ ಬಳಿ ವರದಾ ನದಿ ದಡದಲ್ಲಿ ಮನೋಜ್ ಶವ ಪತ್ತೆಯಾಗಿದೆ. ಶವವನ್ನು ಪೊಲೀಸರು ಹೊರತೆಗೆದಿದ್ದಾರೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

LEAVE A REPLY

Please enter your comment!
Please enter your name here