ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಇಂದು ನಿನ್ನೆಗಿಂತಲೂ ಇಂದು ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಇಂದು ರಾಜ್ಯದಲ್ಲಿ 7,345 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 148 ಜನ ಸಾವನ್ನಪ್ಪಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 1,611 ಪ್ರಕರಣಗಳು ದಾಖಲಾಗಿದ್ದು, 19 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೂ 27,84,355 ಕೊರೊನಾ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರಿನಲ್ಲಿ 1,611 ಜನಕ್ಕೆ ಸೋಂಕು ತಗುಲಿದ್ದು, 19 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇದುರವರೆಗೂ 15,354 ಜನ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿ 79,261 ಸಕ್ರಿಯ ಪ್ರಕರಣಗಳಿವೆ.
ಬಾಗಲಕೋಟೆ, ಬೀದರ್, ಚಿತ್ರದುರ್ಗ, ಹಾವೇರಿ, ಕಲಬುರಗಿ, ರಾಯಚೂರು ಜಿಲ್ಲೆಯಲ್ಲಿ ಕೊರೊನಾದಿಂದ ಯಾವೊಬ್ಬ ವ್ಯಕ್ತಿಯೂ ಸಾವನ್ನಪ್ಪಿಲ್ಲ. ಇಂದು ಬಾಗಲಕೋಟೆ 47, ಬಳ್ಳಾರಿ 183, ಬೆಳಗಾವಿ 254, ಬೆಂಗಳೂರು ಗ್ರಾಮಾಂತರ 275, ಬೆಂಗಳೂರು ನಗರ 1,611, ಬೀದರ್ 14, ಚಾಮರಾಜನಗರ 97, ಚಿಕ್ಕಬಳ್ಳಾಪುರ 145, ಚಿಕ್ಕಮಗಳೂರು 254, ಚಿತ್ರದುರ್ಗ 95, ದಕ್ಷಿಣ ಕನ್ನಡ 790, ದಾವಣಗೆರೆ 207, ಧಾರವಾಡ 112,
ಗದಗ 52, ಹಾಸನ 531, ಹಾವೇರಿ 27, ಕಲಬುರಗಿ 26, ಕೊಡಗು 116, ಕೋಲಾರ 102, ಕೊಪ್ಪಳ 77, ಮಂಡ್ಯ 317, ಮೈಸೂರು 841, ರಾಯಚೂರು 22, ರಾಮನಗರ 58, ಶಿವಮೊಗ್ಗ 262, ತುಮಕೂರು 347, ಉಡುಪಿ 159, ಉತ್ತರ ಕನ್ನಡ 239, ವಿಜಯಪುರ 73 ಮತ್ತು ಯಾದಗಿರಿಯಲ್ಲಿ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.