ಬೆಂಗಳೂರು:- ಸಂಸದ ಸುಧಾಕರ್ ಕಾರು ಚಾಲಕ ಆತ್ಮಹತ್ಯೆ ಕೇಸ್ ಗೆ ಸಂಬಧಪಟ್ಟಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ಕುರಿತು ಇಂದು ಬೆಳಗ್ಗೆಯೇ ಮಾಹಿತಿ ಬಂದಿದೆ. ಬಾಬು ಎನ್ನುವ ಚಾಲಕ ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಅವರ ಜೇಬಿನಲ್ಲಿ ಚೀಟಿ ಇರುವುದು ಪತ್ತೆ ಆಗಿದ್ದು ಇದರಲ್ಲಿ ಸಂಸದ ಡಾ.ಕೆ ಸುಧಾಕರ್, ಲೆಕ್ಕ ಪರಿಶೋಧಕ ಮಂಜುನಾಥ್ ಹಾಗೂ ನಾಗೇಶ್ ಎನ್ನುವವರ ಹೆಸರುಗಳು ಇವೆ ಎಂದು ಹೇಳಿದ್ದಾರೆ.
ಸಂಸದ ಡಾ.ಕೆ ಸುಧಾಕರ್, ಲೆಕ್ಕ ಪರಿಶೋಧಕ ಮಂಜುನಾಥ್ ಹಾಗೂ ನಾಗೇಶ್ ಅವರ ಹೆಸರುಗಳು ಇರುವುದರಿಂದ ಇದು ಸೂಕ್ಷ್ಮವಾದ ವಿಚಾರ ಆಗಿದೆ. ಸಂಪೂರ್ಣವಾಗಿ ಪ್ರಕರಣದ ತನಿಖೆ ಆಗಬೇಕು. ಪೋಲೀಸ್ ಅಧಿಕಾರಿಗಳು, ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಲಿದೆ. ವಸ್ತುಸ್ಥಿತಿ ಏನೇನಿದೆ ಅಂತ ನೋಡಬೇಕು. ಪಾರದರ್ಶಕ ತನಿಖೆ ಆಗಬೇಕು ಎಂದು ಹೇಳಿದ್ದಾರೆ