ರಜತ್ ಕಿಶನ್ ಕೊಲ್ಲುವುದಾಗಿ ಪತ್ನಿ ಅಕ್ಷಿತಾಗೆ ಬೆದರಿಕೆ: ಡಿಜಿಐಜಿಪಿಗೆ ದೂರು ಕೊಟ್ಟ ಬಿಗ್ ಬಾಸ್ ಸ್ಪರ್ಧಿ!

0
Spread the love

ಬೆಂಗಳೂರು:- ರಜತ್ ಕಿಶನ್ ಕೊಲ್ಲುವುದಾಗಿ ಪತ್ನಿ ಅಕ್ಷಿತಾಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಡಿಜಿಐಜಿಪಿಗೆ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ ದೂರು ಕೊಟ್ಟಿದ್ದಾರೆ.

Advertisement

ಯೂಟ್ಯೂಬರ್ಸ್ ಮೇಲೆ ಧರ್ಮಸ್ಥಳದಲ್ಲಿ ಹಲ್ಲೆ ನಡೆದ ವೇಳೆ ರಜತ್ ಕಿಶನ್ ಸ್ಥಳದಲ್ಲಿದ್ದರು. ಈ ಹಿನ್ನೆಲೆ ರಜತ್ ಪತ್ನಿ ಅಕ್ಷಿತಾಗೆ ಕೆಲವು ಕಿಡಿಗೇಡಿಗಳು ಕೊಲೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಜತ್, ನನ್ನ ಪತ್ನಿ ಅಕ್ಷಿತಾಗೆ, ಕೊಲೆ ಮಾಡ್ತೀವಿ ಅಂಥ ಬೆದರಿಕೆ ಸಂದೇಶ ಬಂದಿತ್ತು. ಇದು ಬಹಳ ಕೆಟ್ಟದ್ದು. ನಾವು ಯಾವುದೇ ಜಾತಿ, ಧರ್ಮ ಜಾಗ ದೇವಸ್ಥಾನ ಬಗ್ಗೆ ಮಾತಾಡಿಲ್ಲ. ನಾವು ಹೋಗಿದ್ದು ಸೌಜನ್ಯ ಪರ ನ್ಯಾಯಕ್ಕಾಗಿ. ಕತ್ತರಿಸ್ತೀನಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು.

ಹಾಡಹಗಲೇ ನಮ್ಮ ಕಣ್ಣಮುಂದೆನೇ ಎಲ್ಲ ನಡೆದಿದ್ದು. ಹಲ್ಲೆ ಮಾಡಿದವರ ಮೇಲೆ ದೂರು ಕೊಟ್ಟಿದ್ದೇನೆ. ನನ್ನ ಪತ್ನಿಗೆ ಬೆದರಿಕೆ ಸಂದೇಶ ಹಾಕಿದವರ ವಿರುದ್ಧವೂ ದೂರು ಕೊಟ್ಟಿದ್ದೇವೆ. ನಾವು ಕೊಟ್ಟ ದೂರು ಸೈಬರ್ ಠಾಣೆಗೆ ವರ್ಗಾವಣೆ ಆಗಿದೆ. ಕರಾವಳಿ, ಮಂಡ್ಯ ಅಂತೆಲ್ಲ ಹೇಳುತ್ತಿದ್ದಾರೆ. ನಾವು ಮಂಡ್ಯದವರನ್ನ ಕರ್ಕೊಂಡು ಬರುತ್ತೇವೆ ಎಂದು ಹೇಳಿಲ್ಲ. ಬೆದರಿಕೆಗಳಿಗೆ ನಾವು ಹೆದರಲ್ಲ ಎಂದರು.


Spread the love

LEAVE A REPLY

Please enter your comment!
Please enter your name here