ಗ್ರಾ.ಪಂ ಸದಸ್ಯನ ಮನೆ ದರೋಡೆ ಪ್ರಕರಣ; ಇಬ್ಬರು ಅಂದರ್!

0
Spread the love

ರಾಮನಗರ:- ಮಾಗಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆ ಬಾಗಿಲು ಮುರಿದು ಗ್ರಾ.ಪಂ ಸದಸ್ಯನ ಮನೆ ದರೋಡೆ ಮಾಡಿದ್ದ ಇಬ್ಬರು ಖದೀಮರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ನರಸಿಂಹ ನಾಯಕ್, ಕುಮಾರ್ ನಾಯಕ್ (42) ಬಂಧಿತರು. ಬಂಧಿತ ಆರೋಪಿಗಳಿಂದ 13 ಲಕ್ಷ ಮೌಲ್ಯದ 162 ಗ್ರಾಂ ಚಿನ್ನಾಭರಣ ಹಾಗೂ 5.65 ಲಕ್ಷ ರೂ. ನಗದನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಾಗಡಿ ತಾಲೂಕಿನ ಹಂಚಿಕುಪ್ಪೆ ಗ್ರಾಮ ಪಂಚಾಯಿತಿ ಸದಸ್ಯನ ಮನೆಯಲ್ಲಿ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ದೋಚಲಾಗಿತ್ತು. ಈ ಬಗ್ಗೆ ಮನೆ ಮಾಲೀಕ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.


Spread the love

LEAVE A REPLY

Please enter your comment!
Please enter your name here