ರೈತರಿಂದಲೇ ವರ್ತಕರ ಬದುಕು ಹಸನು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದ ಎ.ಪಿ.ಎಂ.ಸಿ ಯಾರ್ಡ್‌ ನಲ್ಲಿ ಶನಿವಾರ ಬೆಳಿಗ್ಗೆ ಎ.ಪಿ.ಎಂ.ಸಿ ವರ್ತಕರ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಶ್ರೀ ಗಜಾನನ ಧ್ವಜ ಸ್ತಂಭವನ್ನು ಪ್ರತಿಷ್ಠಾಪನೆ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಗಜಾನನೋತ್ಸವ ಟ್ರಸ್ಟ್ ಕಮಿಟಿ ಅಧ್ಯಕ್ಷ ತಿಮ್ಮಣ್ಣ ಕೋನರೆಡ್ಡಿ ಮಾತನಾಡಿ, ಮಳೆ-ಬೆಳೆ ಸಮೃದ್ಧವಾಗಿ ಆಗಿ ರೈತರ ಬದುಕು ಬಂಗಾರವಾದಾಗ ಮಾತ್ರ ವರ್ತಕರ ಬದುಕು ಹಸನಾಗಲಿದೆ. ಪ್ರಥಮ ಪೂಜಿತ ಗಣೇಶನಲ್ಲಿ ಪ್ರಾರ್ಥನೆ ಮಾಡಿ ರೈತರಿಗೆ ಮತ್ತು ವರ್ತಕರಿಗೆ ಯಾವುದೇ ವಿಘ್ನ ಬಾರದಂತೆ ಪ್ರಾರ್ಥನೆ ಸಲ್ಲಿಸೋಣ ಎಂದರು.

ಟ್ರಸ್ಟ್ ಕಮಿಟಿ ಗೌರವಾಧ್ಯಕ್ಷ ಪ್ರಮೋದ್ ವಾರಕರ್, ಕಾರ್ಯದರ್ಶಿ ರಾಜಶೇಖರ ಮುಧೋಳ, ಉಪಾಧ್ಯಕ್ಷ ರಾಜು ಮೂಲಿಮನಿ, ಸಹ ಕಾರ್ಯದರ್ಶಿ ಚಂದ್ರಕಾಂತ ಸವದತ್ತಿ, ಖಜಾಂಚಿ ಮಹೇಶ ಗಾಣಗೇರ, ನೀತಿಶ ವಾಲಿ, ವಿನಾಯಕ ವಜ್ರೇಶ್ವರಿ, ವಿವೇಕಾನಂದ ಗುಡಿಮನಿ, ಕೊಟ್ರೇಶ ಬಾಳಿಕಾಯಿ, ಗಿರೀಶ ಅಳವಂಡಿ, ದಯಾನಂದ ದುಂಡಪ್ಪನವರ, ವಿನಯ ಕಾಡಪ್ಪನವರ, ಅಶೋಕ ಗಡಾದ, ದಲಾಲ ವರ್ತಕರ ಸಂಘದ ಹಾಗೂ ಖರೀದಿ ವರ್ತಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here