Homekoppalಸಿಎಂ ಯಾರದ್ರೇನು? ಶಾಸಕರು ಬೇಜವಾಬ್ದಾರಿ ಹೇಳಿಕೆ ಕೊಡೋದನ್ನ ನಿಲ್ಲಿಸಲಿ: ಎಚ್.ಆರ್ ಶ್ರೀನಾಥ್

ಸಿಎಂ ಯಾರದ್ರೇನು? ಶಾಸಕರು ಬೇಜವಾಬ್ದಾರಿ ಹೇಳಿಕೆ ಕೊಡೋದನ್ನ ನಿಲ್ಲಿಸಲಿ: ಎಚ್.ಆರ್ ಶ್ರೀನಾಥ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಂಗಾವತಿ
ಯಾರೇ ಮುಂದಿನ ಸಿಎಂ ಆಗಲಿ, ಬಿಡಲಿ, ಮೊದಲು ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಈ ವಿಷಯದಲ್ಲಿ ಬೇಜವಾಬ್ದಾರಿ ಹೇಳಿಕೆ ಕೊಡೋದನ್ನ ನಿಲ್ಲಿಸಲಿ ಎಂದು ಮಾಜಿ ಎಂಎಲ್‌ಸಿ ಎಚ್.ಆರ್ ಶ್ರೀನಾಥ್ ಹೇಳಿದರು.
ಜಿಲ್ಲೆಯ ಗಂಗಾವತಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸಿಎಂ ಆಗಬೇಕು, ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡ್ತಾ ಇದ್ರೆ, ಇತ್ತ ಬಿಜೆಪಿಯವರು ಸಿಎಂ ಬದಲಾವಣೆಗಾಗಿ ಕಿತ್ತಾಟ ನಡೆಸ್ತಾ ಇದ್ದಾರೆ. ಮೊದಲು ಶಾಸಕರು ಜನಸೇವೆಯ ಕಾಳಜಿ ತೋರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಸದ್ಯಕ್ಕೆ ಜೆಡಿಎಸ್ ನನ್ನ ಪಕ್ಷ; ಮುಂದಿನ ಬೆಳವಣಿಗೆಗಳ ಬಗ್ಗೆ ಗೊತ್ತಿಲ್ಲ
ಇದೇ ವೇಳೆ ನೀವು ಕಾಂಗ್ರೆಸ್‌ಗೆ ಹೋಗ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಎಚ್.ಆರ್ ಶ್ರೀನಾಥ್, ನಾನು ಹಾಗೂ ನಮ್ಮ ತಂದೆಯವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿ, ಇಂದಿರಾಗಾಂಧಿಯವರ ಗರಡಿ ಮನೆಯಲ್ಲಿ ಬೆಳೆದಿದ್ದೇವೆ. ಆದರೆ ಇದೀಗ ನಾನು ಜೆಡಿಎಸ್ ಪಕ್ಷದಲ್ಲಿ ಇದ್ದು, ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತೆ ಗೊತ್ತಿಲ್ಲ. ಆದರೆ ಸದ್ಯ ಜೆಡಿಎಸ್ ಪಕ್ಷದ ಸಂಘಟನೆ ಮಾಡುತ್ತೀದ್ದೇವೆ ಎಂದು ಕಾಂಗ್ರೆಸ್‌ಗೆ ಹೋಗುವ ಸುಳಿವು ನೀಡಿದರು.
ಅನ್ಸಾರಿ ಎದುರಾಗಬಹುದು ಇಲ್ಲವೇ ಇಬ್ಬರೂ ಒಂದಾಗಬಹುದು
ಅನ್ಸಾರಿಯವರು ಜೆಡಿಎಸ್‌ಗೆ ಬಂದ್ರೆ ಸ್ವಾಗತ ಮಾಡ್ತಿರಾ ಎಂದಾಗ ಪ್ರತಿಕ್ರಿಯಿಸಿದ ಎಚ್.ಆರ್ ಶ್ರೀನಾಥ್, ಜೆಡಿಎಸ್ ಸ್ವಾಗತ ಮಾಡೋದು ಬಿಡೋದು ದೇವೆಗೌಡ್ರು ನಿರ್ಧಾರ ಮಾಡ್ತಾರೆ. ಆದ್ರೆ ಮುಂದಿನ ಚುನಾವಣೆಯಲ್ಲಿ ನನಗೆ ಅನ್ಸಾರಿ ಎದುರಾಗಬಹುದು ಅಥವಾ ನಾವಿಬ್ಬರು ಒಂದಾಗಬಹುದು. ಆದ್ರೆ ಸದ್ಯ ಅನ್ಸಾರಿ ಹಾಗೂ ನನ್ನ ನಡುವೆ ಹೊಂದಾಣಿಕೆ ಸರಿ ಇಲ್ಲ.‌ ಈ ಹಿಂದೆ ಕಾಂಗ್ರೆಸ್‌ಗೆ ಅನ್ಸಾರಿ ಬಂದಾಗ ನನಗೆ ಮಾತು ಕೊಟ್ಟು ಇಕ್ಬಾಲ್ ಅನ್ಸಾರಿ ತಪ್ಪಿದ್ರು. ಇದರಿಂದ ಅವರನ್ನು ನಂಬೋದು ಅಸಾಧ್ಯ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!