ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ಏರಿಯಾಗಳಿಂದ ಯಲಹಂಕಕ್ಕೆ ಸಂಪರ್ಕಿಸುವ ರಸ್ತೆಗಳಲ್ಲಿ ಸಂಚಾರ ಬಂದ್!

0
Spread the love

ಬೆಂಗಳೂರು:– ಇದು ನಗರದ ವಾಹನ ಸವಾರರು ನೋಡಲೇಬೇಕಾದ ಸ್ಟೋರಿ. ಯಲಹಂಕ ನ್ಯೂಟೌನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ರಂದು ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ.

Advertisement

ಯಲಹಂಕ ನ್ಯೂಟೌನ್, ಸಿಂಗಾಪುರ, ಚಿಕ್ಕಬೆಟ್ಟಹಳ್ಳಿ, ದೊಡ್ಡಬೆಟ್ಟಹಳ್ಳಿ, ವಿದ್ಯಾರಣ್ಯಪುರ ಪ್ರದೇಶಗಳ ಆಗಸ್ಟ್​ 31 ರಂದು ಗಣೇಶ ವಿಗ್ರಹ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಸಿಂಗಾಪುರ ಲೇಔಟ್​ನಿಂದ ದೊಡ್ಡಬೊಮ್ಮಸಂದ್ರ ಕೆರೆಯವರೆಗೆ ಎರಡು ಪ್ರತ್ಯೇಕ ಗಣೇಶ ವಿಸರ್ಜನಾ ಮೆರವಣಿಗೆ ಸಾಗಲಿದೆ. ಮತ್ತು ಸಂಭ್ರಮ್ ಕಾಲೇಜು ಆರ್ಚ್​ನಿಂದ ಅಲ್ಲಾಳಸಂದ್ರ ಕೆರೆಯವರೆಗೆ ಮತ್ತೊಂದು ಮೆರವಣಿಗೆ ಸಾಗಲಿದೆ. ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ಬೆಳಿಗ್ಗೆ 09 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜಾಲಹಳ್ಳಿ, ಪೀಣ್ಯ, ಯಶವಂತಪುರ, ವಿಜಯನಗರ, ಕೆಂಗೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಯಲಹಂಕಕ್ಕೆ ಚಲಿಸುವ ಎಲ್ಲ ವಾಹನಗಳನ್ನು ನಿರ್ಬಂಧಿಸಲಾಗಿದೆ. ಎಂಎಸ್ ಪಾಳ್ಯ-ಜೆಲ್ಲಿ ಮಿಷನ್ ಕ್ರಾಸ್-ಜಿಕೆವಿಕೆ ಬ್ಯಾಕ್ ಗೇಟ್ – ತಿರುಮಲ ಧಾಬಾ – ಅತ್ತೂರು ಜಂಕ್ಷನ್ ಮದರ್ ಡೈರಿ ಜಂಕ್ಷನ್ ನಿಂದ ಬೆಳಿಗ್ಗೆ 09 00 ರಿಂದ ರಾತ್ರಿ 10 00 ರವರೆಗೆ ಚಲಿಸುವುದನ್ನು ನಿರ್ಬಂಧಿಸಲಾಗಿದೆ.

ಬದಲಿ ಮಾರ್ಗ ಬಳಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here