ಧರ್ಮಸ್ಥಳ ಕೇಸ್ʼನಲ್ಲಿ ಈ ಸರ್ಕಾರದ ನಡೆವಳಿಕೆ ಸರಿಯಿಲ್ಲ: ಹೆಚ್.ಡಿ ಕುಮಾರಸ್ವಾಮಿ

0
Spread the love

ಬೆಂಗಳೂರು: ಧರ್ಮಸ್ಥಳ ಕೇಸ್‌ʼನಲ್ಲಿ ಈ ಸರ್ಕಾರದ ನಡೆವಳಿಕೆ ಸರಿಯಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಕೇಸ್‌ನಲ್ಲಿ ಸರ್ಕಾರದ ನಡೆವಳಿಕೆ ಸರಿಯಿಲ್ಲ. ಪ್ರಾರಂಭಿಕ ಹಂತದಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ.

Advertisement

ನಾನು ಧರ್ಮವನ್ನು ಬೆರೆಸಲು ಹೋಗಲ್ಲ. ಆದರೆ ಸರ್ಕಾರ ನಡೆದುಕೊಂಡ ರೀತಿ ಕ್ಷೇತ್ರಕ್ಕೆ ಅವಮಾನ, ಅನುಮಾನ ಆಗೋ ರೀತಿಯಲ್ಲಿ ಸರ್ಕಾರ ಎಸ್‌ಐಟಿ ತನಿಖೆ ನಾಟಕ ಆಡಿದೆ ಎಂದು ಕಿಡಿಕಾರಿದ್ದಾರೆ.  ಈ ಕೇಸ್‌ಲ್ಲಿ ಪ್ರಾರಂಭಿಕ ಹಂತದಲ್ಲಿ ಸರ್ಕಾರಕ್ಕೆ ದೂರು ಕೊಟ್ಟಿದ್ದು ದ್ವಾರಕನಾಥ್. ಸಿಎಂಗೆ ಅವರೇ ದೂರು ಕೊಟ್ಟರು.

ಆಗ ಸಿಎಂ ದೂರು ಬಂದ ತಕ್ಷಣ ಕ್ರಮ ತೆಗೆದುಕೊಳ್ಳುವ ವಾತಾವರಣ ನಿರ್ಮಾಣ ಮಾಡಿದರು. ಇದರಲ್ಲಿ ಎಡಪಂಥೀಯ ಶಕ್ತಿಗಳು ಇದೆ ಎಂದು ಹೇಳ್ತಾರೆ. ಯಾರಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ


Spread the love

LEAVE A REPLY

Please enter your comment!
Please enter your name here