ಕೋಲಾರ: ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಹೇಂದ್ರ ಪ್ರಸಾದ್ ಆತ್ಮಹತ್ಯೆಗೆ ಶರಣಾದ ಪೇದೆಯಾಗಿದ್ದು, ಇವರು ಡಿಎಆರ್ನ ಡಾಗ್ ಸ್ಕ್ವಾಡ್ನಲ್ಲಿ ಕೆಲಸ ಮಾಡುತ್ತಿದ್ದರು.
ಜೀವನದಲ್ಲಿ ಜಿಗುಪ್ಸೆ ಹಾಗೂ ವೈಯಕ್ತಿಕ ಕಾರಣಗಳಿಂದ ಮನನೊಂದು ಡೆತ್ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



