ವಿಜಯಸಾಕ್ಷಿ ಸುದ್ದಿ,ಕೊಪ್ಪಳ
ವಿದ್ಯಾರ್ಥಿಗಳ ಶಿಕ್ಷಣದ ಅನುಕೂಲಕ್ಕೆ ಸರಕಾರ ಟ್ಯಾಬ್ಗಳನ್ನು ವಿತರಿಸುತ್ತಿದೆ. ವಿದ್ಯಾರ್ಥಿಗಳು ತಂತ್ರಜ್ಞಾನದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಹಿಟ್ನಾಳ ಮತ್ತು ಬಂಡಿಹರ್ಲಾಪುರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಸಿದ್ದರಾಮಯ್ಯನವರ ಸರಕಾರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತಿತ್ತು. ಈಗ ಟ್ಯಾಬ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಆನಲೈನ್ ತರಗತಿಗಳಿಗೆ ಮತ್ತು ಶಿಕ್ಷಣಕ್ಕೆ ಇದು ಸಹಕಾರಿ. ಎಲ್ಲರೂ ಇದರ ಸದುಪಯೋಗ ಮಾಡಿಕೊಳ್ಳಬೇಕು. ಅಪಾಯಕಾರಿ ಕೊರೊನಾವನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವ ಮೂಲಕ ಎದುರಿಸಬೇಕು. ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಉಪಾದ್ಯಕ್ಷೆ ಜರೀನಾಬೇಗಂ, ತಾಲೂಕ ಪಂಚಾಯತ್ ಅದ್ಯಕ್ಷ ಬಾಲಚಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.