HomeGadag Newsಕ್ರೀಡಾ ಮನೋಭಾವವೇ ಯಶಸ್ಸಿನ ಗುಟ್ಟು

ಕ್ರೀಡಾ ಮನೋಭಾವವೇ ಯಶಸ್ಸಿನ ಗುಟ್ಟು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಇಂದಿನ ಯುವ ಕ್ರೀಡಾಪಟುಗಳು ನಮ್ಮ ರಾಷ್ಟ್ರದ ಸಾಧಕ ಕ್ರೀಡಾಪಟುಗಳ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸೋಲು-ಗೆಲವುಗಳನ್ನು ಸಮಾನವಾಗಿ ಕಾಣುವ ಕ್ರೀಡಾನೋಭಾವವೇ ಜೀವನದ ಯಶಸ್ಸಿನ ಗುಟ್ಟು. ಅದನ್ನು ಅರಿತು ನಡೆಯಬೇಕು ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ಅವರು ಶುಕ್ರವಾರ ಧಾರವಾಡ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತವಾಗಿ ಮೇಜರ್ ಧ್ಯಾನ್‌ಚಂದ್‌ರ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯಲ್ಲಿ ಯಾವುದೇ ಜಾತಿ, ಧರ್ಮದ ಕಟ್ಟಳೆಗಳಿಲ್ಲ. ಮೇಲು ಕೀಳು ಎಂಬ ಭೇದಭಾವ ಇಲ್ಲ. ಕ್ರೀಡಾ ಸಾಧಕರಿಗೆ, ಸ್ಪರ್ಧಾ ವಿಜೇತರಿಗೆ ಸಿನಿಮಾ ನಟಿಯರಿಗಿಂತ ಹೆಚ್ಚು ಗೌರವ, ಅಭಿಮಾನವಿದೆ. ವಿವಿಧ ಸ್ಪರ್ಧೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅನೇಕ ಭಾರತೀಯರು ವಿಶ್ವಮನ್ನಣೆ ಗಳಿಸಿದ್ದಾರೆ. ಅವರ ಸಾಧನೆ, ಜೀವನ ಮೌಲ್ಯಗಳು ನಮಗೆ, ನಮ್ಮ ಕ್ರೀಡಾಪಟುಗಳಿಗೆ ಸ್ಪೂರ್ತಿ ಆಗಬೇಕು ಎಂದರು.

ಕವಿವಿ ಕ್ರೀಡಾ ವಿಭಾಗದ ವಿಶ್ರಾಂತ ಮುಖ್ಯಸ್ಥ ಪ್ರೊ. ಬಿ.ಎಂ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರಿ ಸಹಾಯಕ ನಿರ್ದೇಶಕ ಸದಾನಂದ ಅಮರಾಪೂರ ಸ್ವಾಗತಿಸಿದರು. ಜಿನ್ನಪ್ಪ ಕುಂದಗೋಳ ಕಾರ್ಯಕ್ರಮ ನಿರೂಪಿಸಿದರು. ಎಸ್.ಎಸ್. ಭಾವಿಕಟ್ಟಿ ವಂದಿಸಿದರು. ವೇದಿಕೆಯಲ್ಲಿ ಜಿಮ್ನಾಸ್ಟಿಕ್ ತರಬೇತಿದಾರ ವಿಠ್ಠಲ ಮೂರ್ತಗುಡ್ಡೆ, ನಿವೃತ್ತ ಡಿಡಿಪಿಐ ಗಜಾನನ ಮನ್ನಿಕೇರಿ, ಆಡಳಿತಾಧಿಕಾರಿ ರಾಮ ಬುಡಕಿ ಇದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ತರಬೇತುದಾರರಾದ ಕೆ.ಸುಜಯಕುಮಾರ, ಗಂಗಾಧರ ತಪಶಟ್ಟಿ, ತರಬೇತುದಾರ ಗಣೇಶ ವಾಡಕರ್, ಸುರೇಶ ಆಡಿನ್, ಅಥ್ಲೆಟಿಕ್ಸ್ ತರಬೇತುದಾರ ಆರ್.ಕೆ. ಪಡತಾರೆ ಸೇರಿದಂತೆ ಕ್ರೀಡಾಪಟುಗಳು, ಕ್ರೀಡಾಶಾಲೆಯ ವಿದ್ಯಾರ್ಥಿಗಳು, ಕ್ರೀಡಾ ಪ್ರೇಮಿಗಳು ಭಾಗವಹಿಸಿದ್ದರು.

ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡಾ ಹವ್ಯಾಸವನ್ನು ಹೊಂದಿರಬೇಕು. ಮೇಜರ್ ಧ್ಯಾನ್‌ಚಂದ್ ಅವರಂತೆ ಏಗ್ರಾತೆ, ಅಚಲ ಮನಸ್ಸು, ತರಬೇತಿಯಲ್ಲಿನ ತನ್ಮಯತೆ ಮತ್ತು ನಿರ್ದಿಷ್ಟ ಗುರಿ ಇರಬೇಕು. ಅಂದಾಗ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!