ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಆಗಸ್ಟ್ 31ರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಬಸವದಳದ 1661ನೇ ಶರಣ ಸಂಗಮದಲ್ಲಿ ಹುತಾತ್ಮ ಡಾ. ಎಂ.ಎಂ. ಕಲಬುರ್ಗಿಯವರ 10ನೇ ಸ್ಮರಣೋತ್ಸವ ಹಾಗೂ ಬಸವದಳ ಗದಗ-ಬೆಟಗೇರಿ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿದೆ.
ಅಧ್ಯಕ್ಷತೆಯನ್ನು ಬಸವದಳದ ಅಧ್ಯಕ್ಷ ಶರಣ ವಿ.ಕೆ. ಕರೇಗೌಡ್ರ ವಹಿಸುವರು. ಶರಣ ಕೆ.ಎಸ್. ಬಾಳಿಕಾಯಿ ಉಪನ್ಯಾಸ ಮಾಡುವರು. ಅತಿಥಿಗಳಾಗಿ ಶರಣ ಕೆ.ಎಸ್. ಚೆಟ್ಟಿ (ಸಿ.ಎ) ಆಗಮಿಸುವರು.
ಬಸವದಳದ ಸದಸ್ಯರು, ಶರಣ ಸಾಹಿತ್ಯಾಭಿಮಾನಿಗಳು ಹಾಗೂ ಆಸಕ್ತರು ಭಾಗವಹಿಸಬೇಕೆಂದು ಸಂಘಟಕರ ಪರವಾಗಿ ಪ್ರಕಾಶ ಅಸುಂಡಿ ವಿನಂತಿಸಿದ್ದಾರೆ.



