HomeBellaryಕೌಟುಂಬಿಕ ಕಲಹ - ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಕೌಟುಂಬಿಕ ಕಲಹ – ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

Spread the love

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ಕೌಟುಂಬಿಕ ಕಲಹದಿಂದಾಗಿ ಮನನೊಂದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಈ ಘಟನೆ ನಗರದ ಇಂದಿರಾ ನಗರದಲ್ಲಿ ವರದಿಯಾಗಿದೆ. ಮೃತರನ್ನು ಬಳ್ಳಾರಿ ಇಂದಿರಾ ನಗರದ ಏಳನೇ ಅಡ್ಡರಸ್ತೆಯ ನಿವಾಸಿ ಸಿದ್ದಪ್ಪ ಎಂಬುವವರ ಪತ್ನಿ ಸುನೀತಾ (25) ಮತ್ತು ಆಕೆಯ 2 ವರ್ಷದ ಮಗ ಹಾಗೂ 10 ತಿಂಗಳ‌ ಹೆಣ್ಣು ಮಗು ಎಂದು ಗುರುತಿಸಲಾಗಿದೆ.

ಯಾವಾಗಲೂ ಕ್ಷುಲ್ಲಕ ಕಾರಣಗಳಿಗೆ ಪತಿ ಹಾಗೂ ಪತ್ನಿಯ ಮಧ್ಯೆ ಜಗಳವಾಗುತ್ತಿತ್ತು. ನಿನ್ನೆ ಕೂಡ ಸಣ್ಣ ವಿಚಾರಕ್ಕೆ ಜಗಳವಾಗಿದೆ. ಇದರಿಂದ ಬೇಸರಗೊಂಡ ಸುನೀತಾ ಮನೆಯ ಮುಂಭಾಗದಲ್ಲಿರುವ ನೀರಿನ ಟ್ಯಾಂಕ್ ನಲ್ಲಿ ತನ್ನಿಬ್ಬರು ಮಕ್ಕಳನ್ನು ಮುಳುಗಿಸಿ ಕೊಲ ಮಾಡಿ ಕೊನೆಗೆ ತಾನೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!