ಯಾದಗಿರಿ:- ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದ ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಮೃತರನ್ನು ತಮ್ಮ ಇರ್ಫಾನ್ ಪೇಶಮಾಮ್ (38) ಹಾಗೂ ಅಣ್ಣ ಶಮಶುದ್ದೀನ್ ಪೇಶಮಾಮ್ (42) ಎಂದು ಗುರುತಿಸಲಾಗಿದೆ. ಮಂಗಳವಾರ (ಸೆ.2) ಬೆಳಿಗ್ಗೆ ತಮ್ಮ ಇರ್ಫಾನ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದ.
ಈ ಸುದ್ದಿ ತಿಳಿದ ಅಣ್ಣ ಶಮಶುದ್ದೀನ್ ಗಾಬರಿಯಲ್ಲಿಯೇ ತಮ್ಮನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ. ಈ ವೇಳೆ ಮಾರ್ಗಮಧ್ಯದಲ್ಲಿಯೇ ಅಣ್ಣನೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


