ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಧಾರ್ಮಿಕತೆಯ ಬಗ್ಗೆ ಏನು ಗೊತ್ತಿದೆ? – ಸಿಎಂ ಸಿದ್ದುಗೆ ಚಾಟಿ ಬೀಸಿದ ಜೋಶಿ!

0
Spread the love

ನವದೆಹಲಿ:- ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಧಾರ್ಮಿಕತೆಯ ಬಗ್ಗೆ ಏನು ಗೊತ್ತಿದೆ? ಎಂದು ಹೇಳುವ ಮೂಲಕ ಸಿಎಂ ಸಿದ್ದುಗೆ ಸಚಿವ ಪ್ರಹ್ಲಾದ್ ಜೋಶಿ ಅವರು ಚಾಟಿ ಬೀಸಿದರು.

Advertisement

‘ನಾಡ ಹಬ್ಬಾ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹಣೆಯಲ್ಲಿ ಕುಂಕುಮ ಹಚ್ಚಿ ಬರಬೇಕಿಲ್ಲ’ ಎಂದಿರುವ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಫ್ತಾರ್ ಕೂಟಕ್ಕೆ ಆಹ್ವಾನ ಬಂದರೆ ತಲೆಗೆ ಮುಸ್ಲಿಂ ಟೋಪಿ ಧರಿಸಿ, ಭುಜಕ್ಕೆ ಕಲರ್ ಕಲರ್ ಚೆಕ್ಸ್ ಶಾಲು ಹೊದಿಸಿಕೊಂಡು ಹೋಗುತ್ತಾರಲ್ಲವೇ? ಎಂದು ಪ್ರಶ್ನಿಸಿದರು. ಅತೀವ್ರ ತುಷ್ಟೀಕರಣದಲ್ಲಿ ತೊಡಗಿರುವ, ನಾನೂ ಹಿಂದೂ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಧಾರ್ಮಿಕತೆಯ ಬಗ್ಗೆ ಏನು ಗೊತ್ತಿದೆ ಎಂದು ಚಾಟಿ ಬೀಸಿದ್ದಾರೆ.

ನಾಡಹಬ್ಬ ದಸರಾ ಉದ್ಘಾಟನೆ ಮಾಡುವ ವ್ಯಕ್ತಿಗೆ ಹಣೆಯಲ್ಲಿ ಕುಂಕುಮ ಇಡಬೇಕೆಂಬ ಫತ್ವಾ ಹೊರಡಿಸಲು ನಿಮ್ಮಿಂದ ಸಾಧ್ಯವಿಲ್ಲ ಬಿಡಿ ಎಂದು ಸಿಎಂಗೆ ಮಾತಿನಲ್ಲೇ ತಿವಿದಿರುವ ಸಚಿವರು, ಹಣೆಗೆ ಕುಂಕುಮ ಧರಿಸಬಾರದೆಂಬ ಫತ್ವಾ ಬಾನು ಮುಷ್ತಾಕ್ ಅವರ ಧರ್ಮದಲ್ಲಿಯೇ ಹೊರಡಿಸಲಾಗಿದೆಯಲ್ಲಾ. ಹಾಗಿರುವಾಗ ‘ಹಣೆಯಲ್ಲಿ ಕುಂಕುಮ ಹಚ್ಚಿ ಬರಬೇಕಿಲ್ಲ’ ಎಂಬ ನಿಮ್ಮ ಹೇಳಿಕೆಯೇ ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here