ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ 

0
Spread the love

ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಅಧಿಕ ಮಳೆ ಸುರಿದಿದ್ದು, ಅಲ್ಲದೆ ವಿವಿಧ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ,

ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಸುಳ್ಯ, ಸಿದ್ದಾಪುರ, ಮಂಗಳೂರು, ಆಗುಂಬೆ, ಮಂಕಿ, ಪುತ್ತೂರು, ಮಾಣಿ, ಧರ್ಮಸ್ಥಳ, ಬಂಟವಾಳ, ಕಮ್ಮರಡಿ, ಕೊಪ್ಪ, ಕ್ಯಾಸಲ್​ರಾಕ್, ಉಪ್ಪಿನಂಗಡಿ, ಶಕ್ತಿನಗರ, ಸಂಡೂರು, ಮೂಡುಬಿದಿರೆ, ಜಯಪುರ, ಗೇರುಸೊಪ್ಪ, ಉಡುಪಿ, ಶೃಂಗೇರಿ, ಸೋಮವಾರಪೇಟೆ, ಎನ್​​ಆರ್​​ಪುರ, ಮಾನ್ವಿ, ಮಂಗಳೂರು, ಲೋಂಡಾ, ಕೂಡ್ಲಿಗಿ, ಕೊಟ್ಟಿಗೆಹಾರ, ಕಾರ್ಕಳ, ತಾವರಗೇರಾ, ಮುಲ್ಕಿ, ಕುಶಾಲನಗರದಲ್ಲಿ ಮಳೆಯಾಗಿದೆ.


Spread the love

LEAVE A REPLY

Please enter your comment!
Please enter your name here