ವಿಜಯಸಾಕ್ಷಿ ಸುದ್ದಿ, ನವದೆಹಲಿ
ಕೊರೊನಾದಿಂದಾಗಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ತರ ಆದೇಶ ನೀಡಿದ್ದು, ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸುವಂತೆ ಯೂನಿಯನ್ ಆಫ್ ಇಂಡಿಯಾಗೆ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಕೊರೊನಾದಿಂದಾಗಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ನೀಡಬಹುದಾದ ಪರಿಹಾರದ ಮೊತ್ತದ ಕುರಿತು 6 ವಾರದೊಳಗೆ ಮಾಹಿತಿ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಆದೇಶ ನೀಡಿದೆ.
ಕನಿಷ್ಠ ಪರಿಹಾರವು ಸೆಕ್ಷನ್ 12 ರ ಪ್ರಕಾರ ಎಕ್ಸ್ ಗ್ರೇಷಿಯಾ ನೆರವನ್ನು ಒಳಗೊಂಡಿರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸೆಕ್ಷನ್ 12 ಕಡ್ಡಾಯ ನಿಬಂಧನೆಯಲ್ಲ ಎಂಬ ಕೇಂದ್ರದ ವಾದವನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಸೆಕ್ಷನ್ 12 ಎಂಬ ಪದ ಬಳಕೆ ಒಪ್ಪಿಕೊಂಡಿದೆ.
ಕೇಂದ್ರ ಸರ್ಕಾರಕ್ಕೆ ಇಷ್ಟೇ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಲು ಸಾಧ್ಯವಿಲ್ಲ. ಪರಿಹಾರವಾಗಿ ಎಷ್ಟು ಮೊತ್ತ ನೀಡಬಹುದು ಎಂದು ಪರಿಶೀಲಿಸಿ ಸೂಚಿಸಬೇಕೆಂದು ಮಾರ್ಗಸೂಚಿ ಹೊರಡಿಸುವಂತೆ ಯೂನಿಯನ್ ಆಫ್ ಇಂಡಿಯಾಕ್ಕೆ ಆದೇಶ ನೀಡಿದೆ.