ಪ್ರತಾಪ್ ಸಿಂಹ ಅವರನ್ನ ಪಕ್ಷದವರೇ ನೆಗ್ಲೆಕ್ಟ್ ಮಾಡಿದ್ದಾರೆ; ಸಿದ್ದರಾಮಯ್ಯ ವ್ಯಂಗ್ಯ

0
Spread the love

ಬೆಂಗಳೂರು:- ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಪ್ರತಾಪ್ ಸಿಂಹ ಕೋರ್ಟ್ಗೆ ಹೋಗಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹನನ್ನ ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿ ಬಿಟ್ಟಿದ್ದಾರಲ್ಲ. ಅದಕ್ಕೆ ಕೋರ್ಟ್ ವರೆಗೆ ಹೋಗಿರಬೇಕು. ದಸರಾ ಉದ್ಘಾಟನೆ ವಿಚಾರ ಕೋರ್ಟ್ ನಲ್ಲೇ ತೀರ್ಮಾನ ಆಗಲಿ ಬಿಡಿ. ಹೈದರಾಲಿ, ಟಿಪ್ಪು, ಮಿರ್ಜಾ ಇಸ್ಮಾಯಿಲ್, ನಿಸಾರ್ ಅಹಮದ್ ಅವರ ಬಗ್ಗೆ ಬಿಜೆಪಿ ಅವರು ಕೋರ್ಟ್ ಗೆ ಹೋಗಿರಲಿಲ್ಲ. ಪ್ರತಾಪ್ ಸಿಂಹ ಅವರನ್ನು ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿದ್ದಾರಲ್ಲ. ಅದಕ್ಕೆ ಕೋರ್ಟ್ ವರೆಗೆ ಹೋಗಿರಬೇಕು ಎಂದು ವ್ಯಂಗ್ಯವಾಡಿದರು.


Spread the love

LEAVE A REPLY

Please enter your comment!
Please enter your name here