ಕೋಲಾರ:- ಕೋಲಾರದ ಕಾಮಸಮುದ್ರ ಪೊಲೀಸರು ಕಾರ್ಯಾಚರಣೆ ನಡೆಸಿ ದೇವಾಲಯ, ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಕೆ.ಚಿನ್ನಸ್ವಾಮಿ (57), ಮಣಿ ಬಾಬು (55) ಬಂಧಿತ ಆರೋಪಿಗಳು. ಬಂಗಾರಪೇಟೆ ತಾಲೂಕಿನ ಕುಂದರಸನಹಳ್ಳಿ ಗ್ರಾಮದ ಕಾಳಿಕಾಂಭ ದೇವಸ್ಥಾನ, ದೋಣಿಮಡಗು ಗ್ರಾಮದ ಸತೀಶ್ರೆಡ್ಡಿ, ಸೀನಪ್ಪ ಕೊಂಗರಹಳ್ಳಿ ಗ್ರಾಮದ ವೆಂಕಟೇಶಪ್ಪ, ಮುನಿಯಮ್ಮ, ಶೇಖ್ ಲಿಯಾಕತ್ ಮತ್ತು ಗೌರಮ್ಮ ಮನೆಗಳಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನೆಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 3.78 ಲಕ್ಷ ರೂ. ಮೌಲ್ಯದ 34 ಗ್ರಾಂ ಚಿನ್ನಾಭರಣ, 380 ಗ್ರಾಂ ಬೆಳ್ಳಿ ಆಭರಣಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ದ್ವಿಚಕ್ರವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.