ಬೆಂಗಳೂರು: ಬಿಜೆಪಿ ಬೆಂಬಲಿತ ತಿಪಟೂರಿನ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರಕ್ಕೆ ಇದೀಗ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ನನ್ನ ಕಾಂಗ್ರೆಸ್ ಬದ್ಧತೆ, ಸೈದ್ಧಾಂತಿಕ ನಿಲುವು ಯಾರೂ ಪ್ರಶ್ನೆ ಮಾಡುವಂತಿಲ್ಲ.
Advertisement
ನಾನು ಏನು ಎನ್ನುವುದು ಇಡೀ ಕರ್ನಾಟಕ ಜನಕ್ಕೆ ಗೊತ್ತಿದೆ ಎಂದು ತಿಳಿಸಿದರು. ನಾನು ಕಾಂಗ್ರೆಸ್ ಮನುಷ್ಯ, ಕಾಂಗ್ರೆಸ್ನಲ್ಲೇ ಇರುತ್ತೇನೆ. ಕಾಂಗ್ರೆಸ್ ಮನುಷ್ಯನಾಗಿಯೇ ಸಾಯುತ್ತೇನ ಎಂದರು.ತಿಪಟೂರು ಎಬಿವಿಪಿಯಿಂದ ಗಣೇಶ ಪಂಜಿನ ಮೆರವಣಿಗೆ ಮಂಗಳವಾರ ರಾತ್ರಿ ನಡೆದಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಗೃಹ ಸಚಿವ ಪರಮೇಶ್ವರ್ ಅವರು ರಾಣಿ ಅಬ್ಬಕ್ಕನ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.