-ಕಾಂಗ್ರೆಸ್ ವಿಸರ್ಜನೆ ಆಗುವ ಕಾಲ ಸನ್ನೀಹಿತ
-ಮುಂದಿನ ಎರಡು ವರ್ಷವೂ ಯಡಿಯೂರಪ್ಪ ಅವರೇ ಸಿಎಂ
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಬಿಜೆಪಿಯಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಮಾತೇ ಇಲ್ಲ. ಮುಂದಿನ ಎರಡೂ ವರ್ಷವೂ ಯಡಿಯೂರಪ್ಪ ಅವರೇ ಸಿಎಂ. ದಲಿತ ಸಿಎಂ ಪ್ರಶ್ನೆ ಈಗ ಬೇಡ. ಯಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಿ ಗೆದ್ದಾಗ ಕೇಳಿ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂಬುದು ಪಕ್ಷವೇ ಅಲ್ಲ. ಸ್ವಾತಂತ್ರ್ಯಕ್ಕಾಗಿ ಕಟ್ಟಿದ್ದ ಸಂಘಟನೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಕಾಂಗ್ರೆಸ್ ಸಂಘಟನೆ ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು. ಈಗ ಕಾಂಗ್ರೆಸ್ ವಿಸರ್ಜಿಸುವ ಕಾಲ ಸನ್ನೀಹಿತವಾಗಿದೆ ಎಂದು ಅವರು ಲೇವಡಿ ಮಾಡಿದರು.
ದಲಿತರು, ಅಲ್ಪಸಂಖ್ಯಾತರಯ ಹಾಗೂ ಹಿಂದುಳಿದ ವರ್ಗದವರನ್ನು ಕಾಂಗ್ರೆಸ್ ವೋಟ್ ಬ್ಯಾಂಕ್ ಮಾಡಿಕೊಂಡು ದೇಶದಲ್ಲಿ 60 ವರ್ಷ ಆಳ್ವಿಕೆ ಮಾಡಿದರು. ಆದರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿತ್ತು. ಈಗ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರು ವಿದ್ಯಾವಂತರಾಗಿದ್ದಾರೆ. ಅದಕ್ಕಾಗಿ ಕಳೆದೆರಡು ಚುನಾವಣೆಗಳಲ್ಲಿ ಕಾಂಗ್ರೆಸ್ನಿಂದ ದೂರವಾಗಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ದೇಶದಲ್ಲಿ ಅನಾಥಸ್ಥಿತಿ ಅನುಭವಿಸುತ್ತಿದೆ. ಯಾವ ಸಂದರ್ಭದಲ್ಲೂ ದೇಶದಲ್ಲಿ ಆಡಳಿತಕ್ಕೆ ಬರುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಶೀಘ್ರವೇ ಕಾಂಗ್ರೆಸ್ ದೇಶದಿಂದ ತೊಲಗುವ ಸಮಯ ಹತ್ತಿರ ಬಂದಿದೆ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಮತ್ತಿತರರು ಇದ್ದರು.