ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಗದಗ ನಗರ ಮಂಡಲ ಸೇವಾ ಪಾಕ್ಷಿಕ ಅಭಿಯಾನದ ಉದ್ಘಾಟನೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ, ಹಿರಿಯರಾದ ಶ್ರೀಪತಿ ಉಡುಪಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಯಳವತ್ತಿ, ಅನಿಲ ಅಬ್ಬಿಗೇರಿ, ನಿರ್ಮಲಾ ಕೊಳ್ಳಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಶಂಕರ ಕಾಕಿ, ಸುರೇಶ ಚಿತ್ತರಗಿ, ವಿಜಯಲಕ್ಷ್ಮೀ ಮಾನ್ವಿ, ಶಂಕರ ಕರಿಬಿಷ್ಠಿ, ವಂದನಾ ವರ್ಣೇಕರ, ಮಂಜುನಾಥ ಶಾಂತಗೇರಿ, ಮಂಜುನಾಥ ತಳವಾರ, ರಾಚಯ್ಯ ಹೊಸಮಠ, ಅಪ್ಪಣ್ಣ ಟೆಂಗಿನಕಾಯಿ, ದೇವೇಂದ್ರಪ್ಪ ಹೂಗಾರ, ಜಯಶ್ರೀ ಅಣ್ಣಿಗೇರಿ, ಜಯಶ್ರೀ ಪಾಟೀಲ, ಸ್ವಾತಿ ಅಕ್ಕಿ, ಕವಿತಾ ಬಂಗಾರಿ, ಸುಮಂಗಲಾ ಕೊನೆವಾಲ ಮುಂತಾದವರು ಇದ್ದರು.