ಬೆಂಗಳೂರು:-ಕರ್ನಾಟಕದ ಜನತೆಗೆ ಕೆಎಂಎಫ್ ಗುಡ್ ನ್ಯೂಸ್ ಕೊಟ್ಟಿದ್ದು, ಸೆಪ್ಟೆಂಬರ್ 22ರ ಸೋಮವಾರದಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ ಆಗಲಿದೆ.
ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಆ ಮೂಲಕ ರಾಜ್ಯದ ಜನರಿಗೆ ಕೆಎಂಎಫ್ ಗುಡ್ ನ್ಯೂಸ್ ಕೊಟ್ಟಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.
ಜಿಎಸ್ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್ ಈ ಬಗ್ಗೆ ಶುಕ್ರವಾರ ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧಾರ ಮಾಡಲಾಗಿದೆ. ಮೊಸರಿನ ದರ ಲೀಟರ್ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ ಎಂದು ತಿಳಿದು ಬಂದಿದೆ.