ಕೋವಿಡ್ ರಿಪೋರ್ಟ್ ಇಲ್ಲದಿದ್ದರೆ ರಾಜ್ಯಕ್ಕೆ ನೋ ಎಂಟ್ರಿ!

0
Spread the love

  • ಮಹಾರಾಷ್ಟ್ರ ಗಡಿಭಾಗದಲ್ಲಿ ಹೈ ಅಲರ್ಟ್

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

Advertisement

ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆಯಾಗಿ 3ನೇ ಅಲೆಯ ಆತಂಕ ಸೃಷ್ಟಿಯಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿದೆ.
ಕರ್ನಾಟಕ ಸರ್ಕಾರ ಮತ್ತು ಬೆಳಗಾವಿ ಜಿಲ್ಲಾಡಳಿತದ ಆದೇಶದಂತೆ ನಿಪ್ಪಾಣಿ ಬಳಿಯ ಕೊಗನೊಳ್ಳಿ ಮತ್ತು ಕಾಗವಾಡ ಚೆಕ್ ಪೋಸ್ಟ ತೀವ್ರ ನಿಗಾ ವಹಿಸಲಾಗಿದೆ.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರನ್ನು ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ವಿಚಾರಿಸುತ್ತಿದ್ದಾರೆ. ಕೆಎಸ್ಆರ್ಟಿಸಿ ಸೇರಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ರಿಪೋರ್ಟ ಇದ್ದವರನ್ನು ಮಾತ್ರ ಒಳಗೆ ಬಿಡಲಾಗುತ್ತಿದೆ. ನೆಗೆಟಿವ್ ರಿಪೋರ್ಟ ಇಲ್ಲದವರನ್ನು ವಾಪಸ್ಸು ಮಹಾರಾಷ್ಟ್ರಕ್ಕೆ ಕಳಿಸುವ ಮೂಲಕ ದಿಟ್ಟ ಕ್ರಮ ಕೈಗೊಳ್ಳಲಾಗುತ್ತಿದೆ.

ವಿಶೇಷವಾಗಿ ಬೆಳಗಾವಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ನಿಪ್ಪಾಣಿ ಬಳಿ ಇರುವ ಕೋಗನೋಳಿ ಚೆಕ್ ಪೋಸ್ಟ್ ನಲ್ಲಿ
ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಬರುವ ಎಲ್ಲ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.

 RTPCR ರಿಪೋರ್ಟ್ ಇಲ್ಲದೆ ಪ್ರಯಾಣಿಕರನ್ನು ಕರೆತಂದಿದ್ದ ಖಾಸಗಿ ಬಸ್ ಗಳನ್ನು ವಾಪಸ್ ಕಳುಹಿಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here