ದಾವಣಗೆರೆ:ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ರಾಜ್ಯ ಸರ್ಕಾರ ಜಾತಿಗಣತಿ ಮಾಡುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು,
Advertisement
ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ರಾಜ್ಯ ಸರ್ಕಾರ ಜಾತಿಗಣತಿ ಮಾಡುತ್ತಿದೆ. ಹಿಂದೂಗಳ ಜಾತಿಗಳ ಮುಂದೆ ಕ್ರಿಶ್ಚಿಯನ್ ಸೇರಿಸಿದ್ದಾರೆ. ಜಾತಿ ಆಧಾರದ ಮೇಲೆ ಹಿಂದೂಗಳನ್ನು ಒಡೆಯಲು ಹೊರಟಿದ್ದಾರೆ ಎಂದರು.
ಇನ್ನೂ ಮೊದಲ ಬಾರಿ ಸಿಎಂ ಆಗಿದ್ದಾಗ ವೀರಶೈವ – ಲಿಂಗಾಯತ ಎಂದು ಒಡೆಯಲು ಸಿದ್ದರಾಮಯ್ಯ ಹೋಗಿದ್ದರು. ಆಗ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತ್ತು. ಸಿದ್ದರಾಮಯ್ಯ ಹೀನಾಯವಾಗಿ ಸೋತರು. ಈಗ ಜಾತಿ ಗಣತಿ ಹೆಸರಿನಲ್ಲಿ ಬೇರೆ ಬೇರೆ ಧರ್ಮ ಬರೆಸಲು ಅವಕಾಶ ನೀಡಿದ್ದೀರಿ ಎಂದು ಕಿಡಿಕಾರಿದ್ದಾರೆ.


