HomeEntertainmentವಿರೋಧದ ನಡುವೆಯೂ ‘ಕಾಂತಾರ’ ಸಿನಿಮಾದ ಪರ ನಿಂತ ಪವನ್ ಕಲ್ಯಾಣ್

ವಿರೋಧದ ನಡುವೆಯೂ ‘ಕಾಂತಾರ’ ಸಿನಿಮಾದ ಪರ ನಿಂತ ಪವನ್ ಕಲ್ಯಾಣ್

For Dai;y Updates Join Our whatsapp Group

Spread the love

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು ಸಿನಿಮಾ ನೋಡಲು ಪ್ರತಿಯೊಬ್ಬರು ತುದಿಗಾಲಲ್ಲಿ ನಿಂತಿದ್ದಾರೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ, ವಿದೇಶದಲ್ಲೂ ಕಾಂತಾರ ಸಿನಿಮಾ ಬಿಡುಗಡೆಗೆ ಎದುರು ನೋಡ್ತಿದ್ದಾರೆ. ಈ ಮಧ್ಯೆ ಇತ್ತೀಚೆಗಷ್ಟೆ ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರ ಜಾರಿ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ‘ಕಾಂತಾರ: ಚಾಪ್ಟರ್ 1’ ನಿರ್ಮಿಸಿರುವ ಹೊಂಬಾಳೆ ಫಿಲಮ್ಸ್​​, ನ್ಯಾಯಾಲಯಕ್ಕೆ ಹೋಗಿ ಆದೇಶಕ್ಕೆ ತಡೆ ತಂದಿದ್ದು, ರಾಜ್ಯದಲ್ಲಿ ಹೆಚ್ಚುವರಿ ಮೊತ್ತಕ್ಕೆ ಟಿಕೆಟ್ ಮಾರಾಟ ಮಾಡಲು ಸಜ್ಜಾಗಿದೆ. ಈ ಬೆನ್ನಲ್ಲೆ ಈಗ ನೆರೆಯ ಆಂಧ್ರ ಪ್ರದೇಶದಲ್ಲೂ ಸಹ ಸಿನಿಮಾದ ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ಸಿಕ್ಕಿದೆ.

ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಿನಿಮಾಗಳ ಟಿಕೆಟ್ ದರ ಹೆಚ್ಚು ಮಾಡಬೇಕೆಂದರೆ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ. ಅಂತೆಯೇ ‘ಕಾಂತಾರ: ಚಾಪ್ಟರ್ 1’ ನಿರ್ಮಾಪಕರು ಸರ್ಕಾರಕ್ಕೆ ಮನವಿ ಸಲ್ಲಿಸಿ ಟಿಕೆಟ್ ದರವನ್ನು ಹೆಚ್ಚಿಸಿಕೊಂಡಿದ್ದಾರೆ. ಇದೀಗ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೇ ‘ಕಾಂತಾರ’ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪವನ್ ಕಲ್ಯಾಣ್, ‘ಸಿನಿಮಾಗಳು ಜೋಡಿಸುವ ಕಾರ್ಯವನ್ನು ಮಾಡಬೇಕು, ಮುರಿಯುವ ಕಾರ್ಯವನ್ನು ಮಾಡಬಾರದು. ಕರ್ನಾಟಕದ ಸಿನಿಮಾಗಳು, ಕಲಾವಿದರನ್ನು ನಾವು ದಶಕಗಳಿಂದಲೂ ಸ್ವಾಗತಿಸಿದ್ದೇವೆ. ಡಾ ರಾಜ್​​ಕುಮಾರ್, ಶಿವರಾಜ್ ಕುಮಾರ್, ಉಪೇಂದ್ರ, ಸುದೀಪ್ ಈಗ ರಿಷಬ್ ಶೆಟ್ಟಿ. ಇನ್ನು ತೆಲುಗು ಸಿನಿಮಾಗಳಿಗೆ ಅಲ್ಲಿ ಸಮಸ್ಯೆ ಆಗಿದೆ ಎಂಬ ವಿಚಾರವನ್ನೂ ಎರಡೂ ಚಿತ್ರರಂಗದವರು ಒಟ್ಟಾಗಿ ಕೂತು ಬಗೆಹರಿಸಿಕೊಳ್ಳುವ ವಿಷಯ’ ಎಂದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!