ಅ.2ರಿಂದ ಹಜರತ್ ಮೆಹಬೂಬ ಸುಬ್ಹಾನಿ ಉರುಸು

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಪಟ್ಟಣದ ಕನ್ನಡ ಸಾಹಿತ್ಯ ಭವನದ ಬಳಿ ಇರುವ ಹಜರತ್ ಮೆಹಬೂಬ ಸುಬ್ಹಾನಿ ದರ್ಗಾದ ಉರುಸು ಧಾರ್ಮಿಕ ಕಾರ್ಯಕ್ರಮವು ಹಿಂದೂ-ಮುಸ್ಲಿಂ ಭಕ್ತರ ಸಂಗಮದಲ್ಲಿ ಅ.2ರಿಂದ ಆರಂಭಗೊಳ್ಳಲಿದೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಭಾವಾಸಾಬ ಬೆಟಗೇರಿ ಹೇಳಿದರು.

Advertisement

ಅವರು ಮಂಗಳವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿ,
ಪಟ್ಟಣದ ಸರ್ವ ಜನಾಂಗದವರು ಹಜರತ್ ಮೆಹಬೂಬ ಸುಬ್ಹಾನಿ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಸಹೋದರೆತನವನ್ನು ಮೆರೆಯುತ್ತಾರೆ. ಅ. 2ರಂದು ಗಂಧ ಲೇಪನ ಕಾರ್ಯ ಜರುಗಲಿದ್ದು, ಅ. 3ರಂದು ಹಜರತ್ ಮೆಹಬೂಬ ಸುಬ್ಹಾನಿ ದರ್ಗಾದ ಉರುಸು ನಡೆಯಲಿದೆ. ಈ ದಿನದಂದು ಸಕಲ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದ್ದು, ಉರುಸು ದಿನದಂದು ವಿಶೇಷ ಧಾರ್ಮಿಕ ಕಾರ್ಯಗಳು ಜರುಗಲಿವೆ.

ಪಟ್ಟಣದ ಜನತೆ ಉರುಸು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಯಶಸ್ವಿಗೊಳಿಸಬೇಕು ಎಂದರು. ಮಲಿಕ ಯಲಿಗಾರ ಸೇರಿದಂತೆ ದರ್ಗಾ ಕಮಿಟಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here