ಪ್ರಯಾಗ್ರಾಜ್:- ದುರ್ಗಾ ದೇವಿ ಮೆರವಣಿಗೆ ವೇಳೆ ವೇಗವಾಗಿ ಬಂದ ಕಾರೊಂದು ಜನರ ಮೇಲೆ ಹರಿದಿರುವ ಘಟನೆ ಪ್ರಯಾಗ್ರಾಜ್ನಲ್ಲಿ ಜರುಗಿದೆ.
Advertisement
ಕಾರು ಮೊದಲು ಬೈಕ್ಗೆ ಡಿಕ್ಕಿ ಹೊಡೆದು, ನೃತ್ಯ ಮಾಡುತ್ತಿದ್ದ ಜನರ ಗುಂಪಿನ ಮೇಲೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನೂ ಘಟನೆಯಲ್ಲಿ ಬೈಕ್ ಸವಾರ ಕೂಡ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಜನಾ, ಪೂಜಾ ಮತ್ತು ಲಲಿತಾ ಎಂಬ ಮೂವರು ಮಹಿಳೆಯರು ವೈದ್ಯಕೀಯ ಕಾಲೇಜಿನ ಎಸ್ಆರ್ಎನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.