ಕುಡಿದು ಬಿಲ್ ಕಟ್ಟುವ ವಿಚಾರಕ್ಕೆ ಕೊಲೆ ಮಾಡಿದ್ದ ಆರೋಪಿಗಳ ಬಂಧನ!

0
Spread the love

ದೊಡ್ಡಬಳ್ಳಾಪುರ: ಕುಡಿದು ಬಿಲ್ ಕಟ್ಟುವ ವಿಚಾರಕ್ಕೆ ಕೊಲೆ ಮಾಡಿದ್ದ ಆರೋಪಿಗಳನ್ನು ದೊಡ್ಡಬಳ್ಳಾಪುರ ‌ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗೌತಮ್, ಮಹೇಶ್ ಮತ್ತು ಅನಿಲ್ ಬಂಧಿತ ಆರೋಪಿಗಳಾಗಿದ್ದು,

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಬಳಿ ರಘು ಅಲಿಯಾಸ್ ಬುಲೆಟ್ ರಘು ( 30 ) ಎಂಬುವವನನ್ನ ಕೊಲೆ ಮಾಡಿದ್ದರು. ಸೆಪ್ಟೆಂಬರ್ 25 ರಂದು ಬಾರ್ ನಲ್ಲಿ ಕುಡಿದು ಗಲಾಟೆ ಮಾಡಿಕೊಂಡಿದ್ದರು.

ಈ ವೇಳೆ  ಹಳೆ ವಿಚಾರ ತೆಗೆದು ಹಲ್ಲೆ ಮಾಡಿ ಸಿಮೆಂಟ್ ಇಟ್ಟಿಗೆ ಹಾಕಿ ಕೊಲೆ ಮಾಡಲಾಗಿತ್ತು. ಕೊಲೆ ನಂತರ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಪೊಲೀಸರು ಜೈಲಿಗಟ್ಟಿದ್ದಾರೆ. ದೊಡ್ಡಬಳ್ಳಾಪುರ ‌ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here