HomeKarnataka Newsದೇಶ ಕಂಡ ಅಪರೂಪದ ಸಾಹಿತಿ ಮಹರ್ಷಿ ವಾಲ್ಮೀಕಿಯವರು: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶ ಕಂಡ ಅಪರೂಪದ ಸಾಹಿತಿ ಮಹರ್ಷಿ ವಾಲ್ಮೀಕಿಯವರು: ಮುಖ್ಯಮಂತ್ರಿ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ,

ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.

ಸಚಿವಸಂಪುಟ ಪುನರ್ ರಚನೆ
ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.

ಮನುವಾದಿಗಳ ಕೈವಾಡ
ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುತ್ತಾ, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದರು.

ಸಮೀಕ್ಷೆ ಅವಧಿ ವಿಸ್ತರಣೆ- ಪರಿಶೀಲಿಸಿ ತೀರ್ಮಾನ
ಸಮೀಕ್ಷೆಗೆ ಕಾಲಾವಕಾಶ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!