ವಿಜಯಸಾಕ್ಷಿ ಸುದ್ದಿ, ಬೆಳಗಾವಿ
Advertisement
ಬೆಳಗಾವಿ- ಗೋವಾ ರೈಲ್ವೆ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿ ರೈಲು ಸಂಚಾರ ಬಂದ್ ಆಗಿ, ಗೋವಾಕ್ಕೆ ಹೊರಟಿದ್ದ ರೈಲೊಂದು ದೂಧಸಾಗರ ಬಳಿ ನಿಲುಗಡೆಯಾಗಿದ್ದು, ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.
ಭಾರಿ ಮಳೆಯಿಂದ ಗುಡ್ಡ ಕುಸಿತಗೊಂಡಿದ್ದರಿಂದ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ರೈಲಿನಲ್ಲಿ ಸಿಲುಕಿರುವ ಸಾವಿರಾರು ಜನರಿಗೆ ರೈಲ್ವೆ ಇಲಾಖೆ ಆಹಾರ, ನೀರು ವ್ಯವಸ್ಥೆ ಮಾಡಿದೆ.