ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಪದತ್ಯಾಗ ಖಾತ್ರಿಯಾಗಿರುವ ಮಧ್ಯೆಯೇ ಸಿಎಂ ಯಡಿಯೂರಪ್ಪ ಮತ್ತಷ್ಟು ಆ್ಯಕ್ಟಿವ್ ಆಗಿದ್ದು, ಭಾನುವಾರ ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಂಡು ಪ್ರವಾಹ ಪರಿಸ್ಥಿತಿ ಅವಲೋಕನ ನಡೆಸುವರು. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕೈದು ದಿನದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಬೆಳಗಾವಿಗೆ ಆಗಮಿಸಿ ನಂತರ ಅವರು ವಿವಿಧ ಪ್ರದೇಶಗಳ ವೈಮಾನಿಕ ಸಮೀಕ್ಷೆ ಬಳಿಕ ಪರಿಶೀಲನಾ ಸಭೆಯನ್ನೂ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಡಿಸಿಎಂ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲೆಯ ಸಚಿವರು ಸೇರಿದಂತೆ ಕೆಲವು ಸಚಿವರು ಸಿಎಂಗೆ ಸಾಥ್ ನೀಡಲಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಜೊತೆ ಅವರು ವಿಡಿಯೋ ಸಂವಾದ ನಡೆಸಿದ್ದರು.
ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಹರಡಿರುವುದರಿಂದ ಅದು ನಿಜವಾದಲ್ಲಿ ಸಿಎಂ ಆಗಿ ಬೆಳಗಾವಿ ಜಿಲ್ಲೆಗೆ ಅವರ ಕೊನೆಯ ಭೇಟಿಯಾಗಲಿದೆ ಎಂಬ ಮಾತು ಕೇಳಿಬರುತ್ತಿವೆ.