ತಿರುವನಂತಪುರಂ: ಕೇರಳದ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಯ ಪ್ರಸಿದ್ಧ ಪವಿತ್ರ ಕ್ಷೇತ್ರದಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇರುಮುಡಿ ಕಟ್ಟು ಹೊತ್ತು ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ ಎಂಬ ದಾಖಲೆ ದಾಖಲಿಸಿದ್ದಾರೆ.
Advertisement
ಸೋಮವಾರದಿಂದ ಸಂಜೆ 6:20ರ ಸುಮಾರಿಗೆ ತಿರುವನಂತಪುರಂಕ್ಕೆ ಆಗಮಿಸಿದ ಮುರ್ಮು ಅವರಿಂದು ಹೆಲಿಕಾಪ್ಟರ್ ಮೂಲಕ ಕೇರಳದ ಪ್ರಮಾಡಂ ಇನ್ಡೋರ್ ಸ್ಟೇಡಿಯಂಗೆ ಬಂದಿಳಿದರು,
ಈ ವೇಳೆ ಹೆಲಿಕಾಪ್ಟರ್ ಟೈರ್ ಕಾಂಕ್ರೀಟ್ನಲ್ಲಿ ಹೂತುಹೋಯಿತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹೆಲಿಕಾಪ್ಟರ್ನ್ನು ತಳ್ಳಿ ಬದಿಸರಿಸಿದರು. ನಂತರ ಅಲ್ಲಿಂದ ಶಬರಿಮಲೆಗೆ ತೆರಳಿ ತುಲಾ ಮಾಸ ಪೂಜೆಯ ಕೊನೆಯ ದಿನದಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.