HomeGadag Newsಅ.27ಕ್ಕೆ ಬೆಂಗಳೂರು ಚಲೋ

ಅ.27ಕ್ಕೆ ಬೆಂಗಳೂರು ಚಲೋ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಹರಪನಹಳ್ಳಿ ರೈಲು ಮಾರ್ಗ 2014ರ ರೈಲ್ವೆ ಮುಂಗಡ ಪತ್ರದಲ್ಲಿ ಮಂಜೂರಾತಿ ಆಗಿದ್ದು, 2015ರಲ್ಲಿ ಕೇಂದ್ರ ರೈಲ್ವೆ ಬೋರ್ಡ್ನವರು ಸರ್ವೆ ಮಾಡಿ, ವೆಚ್ಚದಾಯಕವಾದ ಯೋಜನೆಯನ್ನು ಕೇಂದ್ರ ರೇಲ್ವೆ ಕಚೇರಿಯವರು ಕಾಯ್ದಿರಿಸಿದ್ದಾರೆ. ಆದರೆ ಈ ಸರ್ವೆ ವರದಿಯು ಅವೈಜ್ಞಾನಿಕವಾಗಿದೆ. ಗದಗ-ಹರಪನಹಳ್ಳಿ ರೈಲು ಮಾರ್ಗವನ್ನು ಮುಂಡರಗಿ-ಹೂವಿನಹಡಗಲಿ ಮಾರ್ಗವಾಗಿ ಅನುಷ್ಠಾನಗೊಳಿಸಲು ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಮುಂಡರಗಿ ತಾಲೂಕು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಶ.ದೇಸಾಯಿ ಮತ್ತು ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ಜಂಟಿ ಕ್ರಿಯಾಸಮಿತಿ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಯಲ್ಲಪ್ಪ ನವಲಗುಂದ ತಿಳಿಸಿದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರಲ್ಲಿ ಸಂಪೂರ್ಣ ವಿಫಲವಾಗಿವೆ. ಮುಂಡರಗಿ-ಹೂವಿನಹಡಗಲಿ ಮಾರ್ಗವಾಗಿ ಅನುಷ್ಠಾನಗೊಳಿಸಲು ಆಗ್ರಹಿಸಿ ಅ. 27ರಂದು ಗದಗ-ಬೆಟಗೇರಿ ರೈಲ್ವೆ ನಿಲ್ದಾಣದ ಮುಖಾಂತರ ಬೆಂಗಳೂರಿಗೆ ರೈಲ್ವೆ ಪ್ರತಿಭಟನೆ ರ‍್ಯಾಲಿಯು ತೆರಳಿ, ಅ. 28ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಪ್ರದೇಶ ರೈತ ಸಂಘದ ವ್ಹಿ.ಎಸ್. ಗಟ್ಟಿ, ಕಿಸಾನ್ ಜಾಗೃತಿ ವಿಕಾಸ ಜಿಲ್ಲಾ ಘಟಕದ ಧ್ರುವಕುಮಾರ ಹೂಗಾರ, ನಿಂಗಪ್ಪ ಭಂಡಾರಿ, ಕರಿಯಲ್ಲನಗೌಡ್ರ ಮುಂತಾದವರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!