ನಾನು ಬೊಮ್ಮಾಯಿ ಸಚಿವ ಸಂಪು‌ಟ ಸೇರಲ್ಲ

0
Spread the love

  • ಮಾಜಿ ಸಿಎಂ ಜಗದೀಶ ಶೆಟ್ಟರ್ ಅಚ್ಚರಿಯ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಖಾಸಗಿ ಮಾಧ್ಯಮ ವಾಹಿನಿಯೊಂದರ ಜೊತೆಗೆ ಮಾತನಾಡಿರುವ ಅವರು, ನಾನು ಮಾಜಿ ಸಿಎಂ, ಪಕ್ಷದ ಹಿರಿಯ ನಾಯಕ. ಹೀಗಾಗಿ ನೈತಿಕ ಕಾರಣದಿಂದ ಸಂಪುಟಕ್ಕೆ ಸೇರಲ್ಲ.

ನಳೀನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋಗೂ ನನ್ನ ನಿರ್ಧಾರಕ್ಕೂ ಸಂಬಂಧ ಇಲ್ಲ. ಇದು ನನ್ನ ವಯಕ್ತಿಕ ನಿರ್ಧಾರ. ಈಗಾಗಲೇ ನನ್ನ ನಿರ್ಧಾರದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಗಮನಕ್ಕೂ ತಂದಿದ್ದೇನೆ. ಪಕ್ಷ ಹಾಗೂ ಸರ್ಕಾರದಲ್ಲಿ ತಳಮಟ್ಟದಿಂದ ಮೇಲ್ಮಟ್ಟದವರೆಗೂ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here