ಸಿಎಂ ಆಗಿ ಬಸವರಾಜ ಬೊಮ್ಮಾಯಿ ಉತ್ತಮ ಆಯ್ಕೆ; ಜೋಶಿ

0
Spread the love

ವಿಜಯಸಾಕ್ಷಿ ಸುದ್ದಿ, ನವದೆಹಲಿ

Advertisement

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಉತ್ತಮ ಆಯ್ಕೆ. ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಡ್ಡಾ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಬೊಮ್ಮಾಯಿ ಒಳ್ಳೆಯ ಮನುಷ್ಯ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ಹೇಳಿದರು.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಸ್ವಭಾವದಿಂದ ಒಳ್ಳೆಯ ವ್ಯಕ್ತಿ. ನನ್ನ ಆತ್ಮೀಯ ಸ್ನೇಹಿತರೂ ಸಹ ಎಂದು ಹೇಳಿದರು. ಬಿಜೆಪಿಗೆ ಯಡಿಯೂರಪ್ಪ ಕೊಡುಗೆ ದೊಡ್ಡದು. ಕರ್ನಾಟಕದಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸರಕಾರ ಸುಗಮವಾಗಿ ನಡೆಯಲಿದ್ದು, ಉತ್ತಮ ಆಡಳಿತ ನೀಡಲಿದೆ ಎಂದು ಸಚಿವ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಎಲ್ಲ ಸರಿಯಿದೆ. ಏನೇ ಸಮಸ್ಯೆಗಳಿದ್ದರೂ ಚರ್ಚಿಸಿ ಪರಿಹರಿಸಲಾಗುವುದು ಎಂದರು. ರೈತ ಪರ ಕಾನೂನು ವಿರೋಧಿಸಿ ಪ್ರತಿಪಕ್ಷಗಳು ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ನಡೆ ಅಪ್ರಬುದ್ಧವಾದದು. ರೈತರ ಹಿತಕ್ಕಾಗಿ ಈ ಕಾನೂನುಗಳು ಎರಡೂ ಸದನಗಳಲ್ಲಿ ಅಂಗೀಕಾರವಾಗಿವೆ. ಕೃಷಿ ಕಾನೂನು ಜಾರಿಗೊಂಡ ಬಳಿಕ‌ ದೇಶದ ಅನೇಕ ಕಡೆ ಚುನಾವಣೆ ಆಗಿವೆ. ಜನರು ಸರ್ಕಾರದ ನೀತಿ ಸ್ವೀಕರಿಸಿ ಮತಗಳನ್ನು ನೀಡಿದ್ದಾರೆ. ಪ್ರತಿಪಕ್ಷಗಳ ನಡೆಯನ್ನು ದೇಶದ ಜನ ನೋಡುತ್ತಿದ್ದಾರೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here