HomeKarnataka Newsನಾಯಕತ್ವ ಬದಲಾವಣೆ ಸುಳಿವು ಕೊಟ್ಟ ಸಚಿವ ಚಲುವರಾಯಸ್ವಾಮಿ ಹೇಳಿದ್ದೇನು?

ನಾಯಕತ್ವ ಬದಲಾವಣೆ ಸುಳಿವು ಕೊಟ್ಟ ಸಚಿವ ಚಲುವರಾಯಸ್ವಾಮಿ ಹೇಳಿದ್ದೇನು?

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಪವರ್ ಶೇರಿಂಗ್ ವಿಚಾರಗಳ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ನಾಯಕತ್ವ ಬದಲಾವಣೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಮುಂದೆ ಗೊಂದಲವಿಲ್ಲದೇ ಒಳ್ಳೆಯ ರೀತಿ ತೀರ್ಮಾನ ಆಗುತ್ತೆ. ಪರಮೇಶ್ವರ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು, ಬಹಳ ಸೀನಿಯರ್ ಇದ್ದಾರೆ. ಸಿಎಂ ಬದಲಾವಣೆ ಕುರಿತು ನಮ್ಮೊಂದಿಗೆ ಹೈಕಮಾಂಡ್ ಮಾತನಾಡಿಲ್ಲ ಎಂದಿದ್ದಾರೆ.

ನಾನು ಅದರ ಬಗ್ಗೆ ಹೇಳೋಕೆ ಆಗಲ್ಲ. ಅದರ ಬಗ್ಗೆ ಹೈಕಮಾಂಡ್, ಸಿಎಂ, ಡಿಸಿಎಂ ನಡುವೆ ಒಳ್ಳೆಯ ರೀತಿ ತೀರ್ಮಾನ ಆಗುತ್ತೆ. ಕ್ಯಾಬಿನೆಟ್‌ ಫುನರ್ ರಚನೆ ಆಗುತ್ತೋ, ನಾಯಕತ್ವ ಬದಲಾವಣೆ ಆಗುತ್ತೋ, ಏನು ಆಗುತ್ತೆ, ಯಾವಾಗ ಆಗುತ್ತೆ ಗೊತ್ತಿಲ್ಲ.

ಆದ್ರೆ ಬಿಜೆಪಿ ತರಹ ಆಗಲ್ಲ. ನಮಲ್ಲಿ ಶಾಸಕರು ಎಷ್ಟು ಮುಖ್ಯನೋ, ಅಷ್ಟೇ ಹೈಕಮಾಂಡ್ ಮುಖ್ಯ.
ಹೈಕಮಾಂಡ್ ಏನ್ ತೀರ್ಮಾನ ಮಾಡುತ್ತೋ, ತೀರ್ಮಾನ ಒಳ್ಳೆಯ ರೀತಿ ಆಗುತ್ತೆ, ಗೊಂದಲ ಆಗಲ್ಲ.
ವಿರೋಧ ಪಕ್ಷದವರಿಗೆ ಖಾರವಾಗಿ ಏನು ಸಿಗಲ್ಲ.

ಹೈಕಮಾಂಡ್ ಯಾವ ವಿಚಾರವನ್ನು ಹೊರಗಡೆ ಬಿಟ್ಟಿಲ್ಲ. ಬಿಹಾರ ಚುನಾವಣೆ ಮುಗಿದ ಬಳಿಕ ಎಲ್ಲವನ್ನು ಚರ್ಚೆ ಮಾಡುತ್ತಾರೆ ಎಂದು ಕೃಷಿ ಖಾತೆ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.ಈ ಮೂಲಕವಾಗಿ ನಾಯಕತ್ವ ಬದಲಾವಣೆಯಾಗಬಹುದೆಂಬ ಚರ್ಚೆಗೆ ಸಚಿವ ಚಲುವರಾಯಸ್ವಾಮಿ ಪುಷ್ಟಿ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!