HomeGadag Newsತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ

ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶನಿವಾರ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ತಾಯಿ ಭುವನೇಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಚನೆಯ ಮೂಲಕ ಪೂಜೆ ಸಲ್ಲಿಸಿ, ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ವಿವಿಧ ಇಲಾಖೆಯ ಆಕರ್ಷಕ ಸ್ತಬ್ಧಚಿತ್ರಗಳನ್ನೊಳಗೊಂಡ ಮೆರವಣಿಗೆಯು ನಗರದ ಮುನ್ಸಿಪಲ್ ಕಾಲೇಜಿನಿಂದ ಎಚ್.ಕೆ. ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ಬಸವರಾಜ ಕಡೆಮನಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಡಿಡಿಪಿಐ ಆರ್.ಎಸ್. ಬುರುಡಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ. ಮಡ್ಲೂರ, ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಹಿರಿಯರು, ಕನ್ನಡಾಭಿಮಾನಿಗಳು ಹಾಜರಿದ್ದರು.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img