HomeGadag Newsಸೈನಿಕ ಸಮುದಾಯ ಭವನ, ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಇಂದು

ಸೈನಿಕ ಸಮುದಾಯ ಭವನ, ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಇಂದು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಮಾಜಿ ಸೈನಿಕರ ಸಂಘದ ನೂತನ ಸೈನಿಕ ಸಮುದಾಯ ಭವನ ಹಾಗೂ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭವು ನವೆಂಬರ್ 2ರಂದು ಮುಂಜಾನೆ 11 ಗಂಟೆಗೆ ಮುಳಗುಂದ ರಸ್ತೆಯ ಆದಿತ್ಯ ನಗರದಲ್ಲಿ ಜರುಗಲಿದೆ ಎಂದು ಸಂಘದ ಅಧ್ಯಕ್ಷ, ನಿವೃತ್ತ ಸೇನಾಧಿಕಾರಿ ಸುಬೇದಾರ್ ಗೂಳಯ್ಯ ಮಾಲಗಿತ್ತಿಮಠ ಹೇಳಿದರು.

ಸಮುದಾಯ ಭವನದಲ್ಲಿ ಈ ಕುರಿತು ಜರುಗಿದ ಉದ್ಘಾಟನಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ವಿವರಣೆ ನೀಡಿದರು.

ಸಾನಿಧ್ಯವನ್ನು ಓಂಕಾರೇಶ್ವರ ಹಿರೇಮಠದ ಪೂಜ್ಯ ಫಕೀರೇಶ್ವರ ಪಟ್ಟಾಧ್ಯಕ್ಷರು ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸಮುದಾಯ ಭವನವನ್ನು ಉದ್ಘಾಟಿಸುವರು. ಘನ ಅಧ್ಯಕ್ಷತೆಯನ್ನು ನಿವೃತ್ತ ವಾಯು ಸೇನಾಧಿಕಾರಿ ಏರ್ ಕಮಾಂಡರ್ ಸಿ.ಎಸ್. ಹವಲ್ದಾರ ವಹಿಸುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಿ.ಬಿ. ಮಾಲಗಿತ್ತಿಮಠ ವಹಿಸುವರು.

ಮುಖ್ಯ ಅತಿಥಿಗಳಾಗಿ ವಿ.ಪ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಗಣ್ಯರಾದ ಅರವಿಂದ ಶಿಗ್ಗಾಂವಿ, ಸುಧೀಂದ್ರ ಇಟ್ನಾಳ, ಭುವನ್ ಖರೆ, ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಟಿ.ಎಸ್. ಪಾಟೀಲ, ಬಸವರಾಜ ನಿಂಗನಗೌಡರ, ಶಿವಲೀಲಾ ಭಾವಿಕಟ್ಟಿ ಆಗಮಿಸುವರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಕಾರ್ಯದರ್ಶಿ ಸಿ.ಜಿ. ಸೊನ್ನದ, ಖಜಾಂಚಿ ಎಸ್.ಎಫ್. ಹೊನ್ನಪ್ಪನವರ, ಸಂಘಟನಾ ಕಾರ್ಯದರ್ಶಿ ಈರಣ್ಣ ತಳ್ಳಿಕೇರಿ, ಮಹಮ್ಮದ್ ಹನೀಫ್ ಶೇಖಬಾಯಿ, ಲಲಿತಾ ಕುರಹಟ್ಟಿ, ಶರಣಪ್ಪ ಸರ್ವಿ, ವೀರಪ್ಪ ಬಿಂಗಿ, ಶಿವಲೀಲಾ ಭಾವಿಕಟ್ಟಿ, ಕೆ.ಎಸ್. ಹಿರೇಮಠ, ಎಸ್.ಎಸ್. ವಡ್ಡಿಣ, ಬಸವನಗೌಡ ಪಾಟೀಲ ಮುಂತಾದವರಿದ್ದರು.

ಅತಿಥಿಗಳಾಗಿ ಅನುಸೂಯಾ ಬೆಟಗೇರಿ, ಕಿರಣಕುಮಾರ ಕೋಪರ್ಡೆ, ಶಾಂತವ್ವ ಭಜಂತ್ರಿ, ವಿದ್ಯಾ ಕೆ., ಜಿ.ಸಿ. ರೇಶ್ಮಿ, ಕೇಶವ ದೇವಾಂಗ ಆಗಮಿಸುವರು. ಮಾಜಿ ಸೈನಿಕರ ಸಂಘಟನೆಯೊಂದು ಈ ರೀತಿಯ ಸೈನಿಕ ತರಬೇತಿ ಕೇಂದ್ರ/ಸಮುದಾಯ ಭವನ ನಿರ್ಮಿಸಿರುವುದು ರಾಜ್ಯದಲ್ಲಿಯೇ ಪ್ರಥಮ ಎಂಬ ಹೆಗ್ಗಳಿಕೆಗೆ ಗದಗ ಜಿಲ್ಲೆ ಪಾತ್ರವಾಗಿದೆ. ಈ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇತರ ಚುನಾಯಿತ ಜನಪ್ರತಿನಿಧಿಗಳು ಸಹಕಾರ ನೀಡಿದ್ದಾರೆ. ಜೊತೆಗೆ ಮಾಜಿ ಸೈನಿಕರು, ವೀರನಾರಿಯರು ಉದಾರ ದೇಣಿಗೆ ನೀಡಿದ್ದಾರೆ ಎಂದು ಜಿ.ಬಿ. ಮಾಲಗಿತ್ತಿಮಠ ಮಾಹಿತಿ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!